<p><strong>ಚಿಕ್ಕಜಾಜೂರು:</strong> ಇಲ್ಲಿನ ರಾಮಕೃಷ್ಣ ದೇವಸ್ಥಾನದಲ್ಲಿ ಡಿ. 30ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ವೈಕುಂಠ ದರ್ಶನವನ್ನು ಏರ್ಪಡಿಸಲಾಗಿದೆ.</p>.<p>ದೇವಸ್ಥಾನದಲ್ಲಿ ಪಂಚ ಲೋಹಗಳಿಂದ ತಯಾರಿಸಲಾದ ನಾರಾಯಣ, ಶ್ರೀದೇವಿ ಹಾಗೂ ಭೂದೇವಿಯರ ಮೂರ್ತಿಗಳನ್ನು ಮಂಗಳವಾರ ಮುಂಜಾನೆ 5.15ಕ್ಕೆ ಪ್ರತಿಷ್ಠಾಪಿಸಿದ ಬಳಿಕ ಭಕ್ತರಿಗೆ ವೈಕುಂಠ ದರ್ಶನ ಸೇವೆ ಲಭ್ಯವಾಗಲಿದೆ.</p>.<p>ದೇವಸ್ಥಾನ ಸಮಿತಿಯ ಸದಸ್ಯರು ದೇವಸ್ಥಾನವನ್ನು ಭಾನುವಾರ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಯಿತು. ಕಲಾವಿದ ತೀರ್ಥಾಚಾರ್ ಅವರು ವೈಕುಂಠ ಮಂಟಪವನ್ನು ವಿವಿಧ ಬಣ್ಣಗಳಿಂದ ಅಲಂಕಾರ ಮಾಡುತ್ತಿದ್ದುದು ಕಂಡುಬಂದಿತು.</p>.<p>ಹೋಮ ಹಾಗೂ ಮೆರವಣಿಗೆ: ಮಂಗಳವಾರ ಮುಂಜಾನೆ 4 ಗಂಟೆಗೆ ಪುರೋಹಿತ ಶ್ರೀನಿವಾಸ ಮೂರ್ತಿ ಅವರು ಹೋಮ ನಡೆಸಲಿದ್ದಾರೆ. ಸಂಜೆ ನಾರಾಯಣ, ಶ್ರೀದೇವಿ ಹಾಗೂ ಭೂದೇವಿಯರ ಉತ್ಸವ ಮೂರ್ತಿಗಳನ್ನು ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಪೂಜೆಯ ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ಇಲ್ಲಿನ ರಾಮಕೃಷ್ಣ ದೇವಸ್ಥಾನದಲ್ಲಿ ಡಿ. 30ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ವೈಕುಂಠ ದರ್ಶನವನ್ನು ಏರ್ಪಡಿಸಲಾಗಿದೆ.</p>.<p>ದೇವಸ್ಥಾನದಲ್ಲಿ ಪಂಚ ಲೋಹಗಳಿಂದ ತಯಾರಿಸಲಾದ ನಾರಾಯಣ, ಶ್ರೀದೇವಿ ಹಾಗೂ ಭೂದೇವಿಯರ ಮೂರ್ತಿಗಳನ್ನು ಮಂಗಳವಾರ ಮುಂಜಾನೆ 5.15ಕ್ಕೆ ಪ್ರತಿಷ್ಠಾಪಿಸಿದ ಬಳಿಕ ಭಕ್ತರಿಗೆ ವೈಕುಂಠ ದರ್ಶನ ಸೇವೆ ಲಭ್ಯವಾಗಲಿದೆ.</p>.<p>ದೇವಸ್ಥಾನ ಸಮಿತಿಯ ಸದಸ್ಯರು ದೇವಸ್ಥಾನವನ್ನು ಭಾನುವಾರ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಯಿತು. ಕಲಾವಿದ ತೀರ್ಥಾಚಾರ್ ಅವರು ವೈಕುಂಠ ಮಂಟಪವನ್ನು ವಿವಿಧ ಬಣ್ಣಗಳಿಂದ ಅಲಂಕಾರ ಮಾಡುತ್ತಿದ್ದುದು ಕಂಡುಬಂದಿತು.</p>.<p>ಹೋಮ ಹಾಗೂ ಮೆರವಣಿಗೆ: ಮಂಗಳವಾರ ಮುಂಜಾನೆ 4 ಗಂಟೆಗೆ ಪುರೋಹಿತ ಶ್ರೀನಿವಾಸ ಮೂರ್ತಿ ಅವರು ಹೋಮ ನಡೆಸಲಿದ್ದಾರೆ. ಸಂಜೆ ನಾರಾಯಣ, ಶ್ರೀದೇವಿ ಹಾಗೂ ಭೂದೇವಿಯರ ಉತ್ಸವ ಮೂರ್ತಿಗಳನ್ನು ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಪೂಜೆಯ ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>