‘ಶಾಲಾ ಕೊಠಡಿಗಳ ಚಾವಣಿ ಮತ್ತು ಗೋಡೆಗಳು ಕುಸಿಯುವ ಹಂತದಲ್ಲಿವೆ. ಯಾವಾಗ ಬೇಕಾದರೂ ಬೀಳುವ ಆತಂಕ ಎದುರಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮಳೆಗಾಲದಲ್ಲಿ ಭಯದಿಂದ ಒಳಗಡೆ ಕುಳಿತುಕೊಳ್ಳುವ ಪರಿಸ್ಥಿತಿಯಿದೆ. ದುರಸ್ತಿಗಾಗಿ ಶಿಕ್ಷಣ ಇಲಾಖೆಗೆ, ಜಿಲ್ಲಾ ಪಂಚಾಯಿತಿ, ಶಾಸಕರು, ಸಂಸದರಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಎಸ್ಡಿಎಂಸಿ ಉಪಾಧ್ಯಕ್ಷೆ ಅಮೃತಾ, ಸದಸ್ಯ ಕುಮಾರಸ್ವಾಮಿ, ಜಿ.ತಿಪ್ಪೇಸ್ವಾಮಿ ಹೇಳಿದರು.