ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಸೋಮವಾರ ಭೇಟಿ ಮಾಡಿದರು.
ಬಾಲಕಿಯರ ಬಾಲ ಮಂದಿರಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಅವರೊಂದಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿದೇವಿ, ಪೊಲೀಸ್ ವರಿಷ್ಠಾಧಿಕಾರಿ ಪರುಶರಾಮ್ ಇದ್ದರು.
ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಕ್ಕಳಿಂದ ಮಾಹಿತಿ ಪಡೆದರು. ಜಯಶ್ರೀ ಅವರು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬಾಲಮಂದಿರದಲ್ಲಿ ಇದ್ದರು.
ಇದಕ್ಕೂ ಮುನ್ನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಗಿರೀಶ್ ಭೇಟಿ ನೀಡಿ ಮಕ್ಕಳೊಂದಿಗೆ ಮಾತನಾಡಿದರು. ಕಾನೂನು ಸೇವೆಯನ್ನು ಉಚಿತವಾಗಿ ನೀಡುವ ಆಶ್ವಾಸನೆ ನೀಡಿದರು.