<p><strong>ಚಿಕ್ಕಜಾಜೂರು:</strong> ‘ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆ ತಡೆಗಟ್ಟಲು ರೈಲ್ವೆ ಪ್ರಯಾಣಿಕರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದು ಚಿತ್ರದುರ್ಗ ಆಶ್ರಿತ ಸಂಸ್ಥೆಯ ಜಿಲ್ಲಾ ಸಮನ್ವಯಾಧಿಕಾರಿ ಡಿ.ಒ.ಮುರಾರ್ಜಿ ತಿಳಿಸಿದರು.</p>.<p>ಚಿಕ್ಕಜಾಜೂರು ರೈಲ್ವೆ ನಿಲ್ದಾಣದಲ್ಲಿ ಚಿತ್ರದುರ್ಗ ಆಶ್ರಿತ ಸಂಸ್ಥೆ, ನೈರುತ್ಯ ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳಿಗೆ, ಮಹಿಳೆಯರಿಗೆ ದೇಶ, ವಿದೇಶಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡುವ ಕುತಂತ್ರಗಳು ನಡೆಯುತ್ತಿದ್ದು, ಆ ಮೂಲಕ ಮಹಿಳೆ ಹಾಗೂ ಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಅನಾಥ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆಗೆ ದೂಡುವ ಜಾಲಗಳು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದ್ದು, ಅದನ್ನು ಮಟ್ಟ ಹಾಕಲು ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಆಶ್ರಿತ ಸಂಸ್ಥೆಯು ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ರೈಲ್ವೆ ರಕ್ಷಣಾ ದಳದ ಎಸ್.ಐ. ಚಂದ್ರಶೇಖರ್ ಮಾತನಾಡಿದರು. ರೈಲ್ವೆ ನಿಲ್ದಾಣ ವ್ಯವಸ್ಥಾಪಕ ವಿ. ನಾಗಪ್ರತಾಪ್, ಹೆಡ್ಕಾನ್ಸ್ಟೆಬಲ್ ಈರನಾಗಪ್ಪ, ಆಶ್ರಿತ ಸಂಸ್ಥೆಯ ತಿಪ್ಪೇಸ್ವಾಮಿ, ಹರ್ಷವರ್ಧನ್, ದೇವೀರಮ್ಮ, ರೈಲ್ವೆ ಇಲಾಖೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ‘ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆ ತಡೆಗಟ್ಟಲು ರೈಲ್ವೆ ಪ್ರಯಾಣಿಕರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದು ಚಿತ್ರದುರ್ಗ ಆಶ್ರಿತ ಸಂಸ್ಥೆಯ ಜಿಲ್ಲಾ ಸಮನ್ವಯಾಧಿಕಾರಿ ಡಿ.ಒ.ಮುರಾರ್ಜಿ ತಿಳಿಸಿದರು.</p>.<p>ಚಿಕ್ಕಜಾಜೂರು ರೈಲ್ವೆ ನಿಲ್ದಾಣದಲ್ಲಿ ಚಿತ್ರದುರ್ಗ ಆಶ್ರಿತ ಸಂಸ್ಥೆ, ನೈರುತ್ಯ ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳಿಗೆ, ಮಹಿಳೆಯರಿಗೆ ದೇಶ, ವಿದೇಶಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡುವ ಕುತಂತ್ರಗಳು ನಡೆಯುತ್ತಿದ್ದು, ಆ ಮೂಲಕ ಮಹಿಳೆ ಹಾಗೂ ಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಅನಾಥ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆಗೆ ದೂಡುವ ಜಾಲಗಳು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದ್ದು, ಅದನ್ನು ಮಟ್ಟ ಹಾಕಲು ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಆಶ್ರಿತ ಸಂಸ್ಥೆಯು ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ರೈಲ್ವೆ ರಕ್ಷಣಾ ದಳದ ಎಸ್.ಐ. ಚಂದ್ರಶೇಖರ್ ಮಾತನಾಡಿದರು. ರೈಲ್ವೆ ನಿಲ್ದಾಣ ವ್ಯವಸ್ಥಾಪಕ ವಿ. ನಾಗಪ್ರತಾಪ್, ಹೆಡ್ಕಾನ್ಸ್ಟೆಬಲ್ ಈರನಾಗಪ್ಪ, ಆಶ್ರಿತ ಸಂಸ್ಥೆಯ ತಿಪ್ಪೇಸ್ವಾಮಿ, ಹರ್ಷವರ್ಧನ್, ದೇವೀರಮ್ಮ, ರೈಲ್ವೆ ಇಲಾಖೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>