ಬೆಳಗಿನ ಜಾವ 5.30ಕ್ಕೆ ದೇವಾಲಯದ ಆವರಣದಲ್ಲಿ ಬಾಳೆಕಂದು ನೆಟ್ಟು, ವಿಶೇಷ ಪೂಜೆ ಸಲ್ಲಿಸಿ ಅದನ್ನು ಕಡಿಯುವ ಮೂಲಕ ಅಂಬಿನೋತ್ಸವ ಆಚರಿಸಲಾಯಿತು. ಭಕ್ತರು ಉದ್ದನೆಯ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಕೋವಿಡ್ ನಂತರ ವೈಭವದಿಂದ ನಡೆದ ಅಂಬಿನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರ ಸುರಕ್ಷತೆಗಾಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಚಿತ್ರದುರ್ಗ, ಹೊಸದುರ್ಗ, ದಾವಣಗೆರೆ, ಶಿವಮೊಗ್ಗ ಕಡೆಗಳಿಂದ ಬರುವ ಭಕ್ತರಿಗೆ ಅನುಕೂಲ ಆಗುವಂತೆ ಹೆಚ್ಚುವರಿ ಖಾಸಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು.