<p><strong>ಹೊಸದುರ್ಗ</strong>: ತಾಲ್ಲೂಕಿನ ಬಾಗೂರು ರೇವಣಸಿದ್ದೇಶ್ವರ ಸಿಂಹಾಸನ ಗುರುಪೀಠದ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ₹ 25 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.</p>.<p>ಸಮೀಪದ ಬಾಗೂರಿನಲ್ಲಿ ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಂಸ್ಥಾನ ಗುರುಪೀಠದ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣ ಸಂಬಂಧ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಜಗದ್ಗುರು ರೇವಣಸಿದ್ದೇಶ್ವರ ಸಂಸ್ಥಾನದ 20ಕ್ಕೂ ಅಧಿಕ ಹಳ್ಳಿಯ ಭಕ್ತರು ಸೇರಿದಂತೆ ಒಕ್ಕಲುಗಳು ದೇಗುಲ ನಿರ್ಮಾಣಕ್ಕೆ ಎಲ್ಲರು ಸಂಘಟಿತರಾಗಿ ಕೈಜೋಡಿಸಬೇಕು. ತಾಲ್ಲೂಕಿನ ಎಲ್ಲ ಸಮುದಾಯಗಳಿಗೆ ಅನುದಾನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.</p>.<p>‘ಹಾಲುಮತದ ಸಂಪ್ರದಾಯ ಸಂಸ್ಕಾರದಂತೆ ಐತಿಹಾಸಿಕ ಗುರುಪೀಠಗಳ ನಿರ್ಮಾಣ ಮಾಡುವ ಮೂಲಕ ಸಮಾಜ ಮುಖಿಯಾದ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ಗುರುಪೀಠದ ಮಂಜಯ್ಯ ಒಡೆಯರ್ ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ದೇಶ್ವರ ಸಿಂಹಾಸನ ಸಂಬಂಧಿಸಿದ ಗುಡಿಕಟ್ಟಿನ ಎಲ್ಲ ವ್ಯಾಪ್ತಿಯ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ತಾಲ್ಲೂಕಿನ ಬಾಗೂರು ರೇವಣಸಿದ್ದೇಶ್ವರ ಸಿಂಹಾಸನ ಗುರುಪೀಠದ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ₹ 25 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.</p>.<p>ಸಮೀಪದ ಬಾಗೂರಿನಲ್ಲಿ ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಂಸ್ಥಾನ ಗುರುಪೀಠದ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣ ಸಂಬಂಧ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಜಗದ್ಗುರು ರೇವಣಸಿದ್ದೇಶ್ವರ ಸಂಸ್ಥಾನದ 20ಕ್ಕೂ ಅಧಿಕ ಹಳ್ಳಿಯ ಭಕ್ತರು ಸೇರಿದಂತೆ ಒಕ್ಕಲುಗಳು ದೇಗುಲ ನಿರ್ಮಾಣಕ್ಕೆ ಎಲ್ಲರು ಸಂಘಟಿತರಾಗಿ ಕೈಜೋಡಿಸಬೇಕು. ತಾಲ್ಲೂಕಿನ ಎಲ್ಲ ಸಮುದಾಯಗಳಿಗೆ ಅನುದಾನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.</p>.<p>‘ಹಾಲುಮತದ ಸಂಪ್ರದಾಯ ಸಂಸ್ಕಾರದಂತೆ ಐತಿಹಾಸಿಕ ಗುರುಪೀಠಗಳ ನಿರ್ಮಾಣ ಮಾಡುವ ಮೂಲಕ ಸಮಾಜ ಮುಖಿಯಾದ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ಗುರುಪೀಠದ ಮಂಜಯ್ಯ ಒಡೆಯರ್ ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ದೇಶ್ವರ ಸಿಂಹಾಸನ ಸಂಬಂಧಿಸಿದ ಗುಡಿಕಟ್ಟಿನ ಎಲ್ಲ ವ್ಯಾಪ್ತಿಯ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>