<p><strong>ಹಿರಿಯೂರು</strong>: ಸಾಂಕ್ರಾಮಿಕ ರೋಗಗಳಿಂದ ಮುಕ್ತರಾಗಲು ಪ್ರತಿಯೊಬ್ಬರೂ ಶುದ್ಧೀಕರಿಸಿದ ನೀರು ಸೇವಿಸುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.</p>.<p>ನಗರದ 24ನೇ ವಾರ್ಡ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರಿಯೂರು ನಗರದ ಜನರಿಗೆ ಬಹಳಷ್ಟು ವರ್ಷಗಳವರೆಗೆ ವಾಣಿವಿಲಾಸ ಅಣೆಕಟ್ಟೆಯಿಂದ ವೇದಾವತಿ ನದಿ ಮೂಲಕ ನೀರು ತಂದು ಪೂರೈಸಲಾಗುತ್ತಿತ್ತು. ಕುಡಿಯುವ ನೀರು ತುಂಬಾ ಕಲುಷಿತವಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಬರುತ್ತಿದ್ದವು. ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಅಂದಾಜು ₹ 40 ಕೋಟಿ ವೆಚ್ಚದಲ್ಲಿ ಪೈಪ್ಲೈನ್ ಮೂಲಕ ನಗರಕ್ಕೆ ನೀರು ಪೂರೈಸಲು ಯೋಜನೆ ರೂಪಿಸಿ ಜಾರಿಗೊಳಿಸಲಾಗಿದೆ. ಜನರಿಗೆ ಶುದ್ಧ ನೀರು, ಉತ್ತಮ ರಸ್ತೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಈರಲಿಂಗೇಗೌಡ, ವಿ.ಶಿವಕುಮಾರ್, ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ಹರಿಪ್ರಸಾದ್ ರೈ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ಸಾಂಕ್ರಾಮಿಕ ರೋಗಗಳಿಂದ ಮುಕ್ತರಾಗಲು ಪ್ರತಿಯೊಬ್ಬರೂ ಶುದ್ಧೀಕರಿಸಿದ ನೀರು ಸೇವಿಸುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.</p>.<p>ನಗರದ 24ನೇ ವಾರ್ಡ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರಿಯೂರು ನಗರದ ಜನರಿಗೆ ಬಹಳಷ್ಟು ವರ್ಷಗಳವರೆಗೆ ವಾಣಿವಿಲಾಸ ಅಣೆಕಟ್ಟೆಯಿಂದ ವೇದಾವತಿ ನದಿ ಮೂಲಕ ನೀರು ತಂದು ಪೂರೈಸಲಾಗುತ್ತಿತ್ತು. ಕುಡಿಯುವ ನೀರು ತುಂಬಾ ಕಲುಷಿತವಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಬರುತ್ತಿದ್ದವು. ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಅಂದಾಜು ₹ 40 ಕೋಟಿ ವೆಚ್ಚದಲ್ಲಿ ಪೈಪ್ಲೈನ್ ಮೂಲಕ ನಗರಕ್ಕೆ ನೀರು ಪೂರೈಸಲು ಯೋಜನೆ ರೂಪಿಸಿ ಜಾರಿಗೊಳಿಸಲಾಗಿದೆ. ಜನರಿಗೆ ಶುದ್ಧ ನೀರು, ಉತ್ತಮ ರಸ್ತೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಈರಲಿಂಗೇಗೌಡ, ವಿ.ಶಿವಕುಮಾರ್, ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ಹರಿಪ್ರಸಾದ್ ರೈ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>