ಆಸ್ಪತ್ರೆಗೆ ದಾಖಲಾಗುವ ಒಳರೋಗಿಗಳಿಗೆ ಹಾಲು, ಬ್ರೆಡ್, ತಿಂಡಿ, ಅನ್ನ, ಸಾಂಬಾರು, ಟೀ ಸೇರಿ ಇತರ ಆಹಾರ ನೀಡಲಾಗುತ್ತದೆ. ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುವ ರೋಗಿಗಳಿಗೆ ಅನ್ನದ ಪದಾರ್ಥ ಕಡಿಮೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅನ್ನದ ಬದಲಿಗೆ ಚಪಾತಿ ನೀಡುವುದು ಸೂಕ್ತವೆಂದು ಸಲಹೆ ನೀಡಿದರು. ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವಂತೆ ಹೇಳಿದರು.