<p><strong>ಚಿತ್ರದುರ್ಗ</strong>: ಕಳೆದ ಹದಿನೈದು ದಿನದ ಹಿಂದೆ ಬೀದಿ ನಾಯಿಯಿಂದ ಕಡಿತಕ್ಕೊಳಗಾಗಿದ್ದ ಮೆದೇಹಳ್ಳಿ ಗ್ರಾಮದ ಬಾಲಕ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ.</p><p>ಗ್ರಾಮದ ರಾಮಪ್ಪ, ಲಕ್ಷ್ಮಿ ದಂಪತಿಯ ಪುತ್ರ ತರುಣ್ (10) ಮೃತ ಬಾಲಕ. ಶಾಲೆಗೆ ಹೋಗುವ ಸಮಯದಲ್ಲಿ ನಾಯಿ ದಾಳಿ ನಡೆಸಿ ತೀವ್ರವಾಗಿ ಕಚ್ಚಿ ಗಾಯಗೊಳಿಸಿತ್ತು. ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಕೆಲ ದಿನದ ಚಿಕಿತ್ಸೆ ಬಳಿಕ ಚೇತರಿಕೆ ಕಾಣದ ಕಾರಣ ವೈದ್ಯರ ಸಲಹೆಯಂತೆ ಪಾಲಕರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆ ಸೋಂಕು ದೇಹದಲ್ಲಿ ತೀವ್ರವಾಗಿ ಹರಡಿದ್ದ ಕಾರಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>‘ಬಾಲಕನಿಗೆ ಕಚ್ಚಿದ ನಾಯಿ ಗ್ರಾಮದಲ್ಲಿ ನಾಲ್ವರ ಮೇಲೆ ದಾಳಿ ನಡೆಸಿತ್ತು. ಆದರೆ ಅವರು ಚಿಕಿತ್ಸೆ ಪಡೆದು ಗುಣಮುಖರಾದರು. ಆದರೆ ನನ್ನ ಮಗ ಮಾತ್ರ ಬದುಕಿ ಬರಲಿಲ್ಲ’ ಎಂದು ತರುಣ್ ದೊಡ್ಡಮ್ಮ ರೇಣುಕಾ ಕಣ್ಣೀರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಕಳೆದ ಹದಿನೈದು ದಿನದ ಹಿಂದೆ ಬೀದಿ ನಾಯಿಯಿಂದ ಕಡಿತಕ್ಕೊಳಗಾಗಿದ್ದ ಮೆದೇಹಳ್ಳಿ ಗ್ರಾಮದ ಬಾಲಕ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ.</p><p>ಗ್ರಾಮದ ರಾಮಪ್ಪ, ಲಕ್ಷ್ಮಿ ದಂಪತಿಯ ಪುತ್ರ ತರುಣ್ (10) ಮೃತ ಬಾಲಕ. ಶಾಲೆಗೆ ಹೋಗುವ ಸಮಯದಲ್ಲಿ ನಾಯಿ ದಾಳಿ ನಡೆಸಿ ತೀವ್ರವಾಗಿ ಕಚ್ಚಿ ಗಾಯಗೊಳಿಸಿತ್ತು. ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಕೆಲ ದಿನದ ಚಿಕಿತ್ಸೆ ಬಳಿಕ ಚೇತರಿಕೆ ಕಾಣದ ಕಾರಣ ವೈದ್ಯರ ಸಲಹೆಯಂತೆ ಪಾಲಕರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆ ಸೋಂಕು ದೇಹದಲ್ಲಿ ತೀವ್ರವಾಗಿ ಹರಡಿದ್ದ ಕಾರಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>‘ಬಾಲಕನಿಗೆ ಕಚ್ಚಿದ ನಾಯಿ ಗ್ರಾಮದಲ್ಲಿ ನಾಲ್ವರ ಮೇಲೆ ದಾಳಿ ನಡೆಸಿತ್ತು. ಆದರೆ ಅವರು ಚಿಕಿತ್ಸೆ ಪಡೆದು ಗುಣಮುಖರಾದರು. ಆದರೆ ನನ್ನ ಮಗ ಮಾತ್ರ ಬದುಕಿ ಬರಲಿಲ್ಲ’ ಎಂದು ತರುಣ್ ದೊಡ್ಡಮ್ಮ ರೇಣುಕಾ ಕಣ್ಣೀರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>