ಮೃತರನ್ನು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕುದರಿ ಸಾಲವಡಗಿಯ ಗ್ರಾಮದ ಸಂಗನಬಸವಪ್ಪ (36), ಪತ್ನಿ ರೇಖಾ (29), ಪುತ್ರ ಅಗಸ್ತ್ಯ (7), ಸಂಬಂಧಿ ಭೀಮಾಶಂಕರ್ (26) ಹಾಗೂ ಚಾಲಕ ಮಧುಸೂದನ್ (25) ಎಂದು ಗುರುತಿಸಲಾಗಿದೆ. ಸಂಗನಬಸವಪ್ಪ ಅವರ ಮತ್ತೊಬ್ಬ ಪುತ್ರ
ಆದರ್ಶ (3), ಪುತ್ರಿ ಅನ್ವಿಕಾ (5) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಂಕ್ ನೌಕರರಾಗಿದ್ದ ಸಂಗನಬಸಪ್ಪ ರಜೆ ಇರುವುದರಿಂದ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಿದ್ದರು. ಶನಿವಾರ ರಾತ್ರಿ 11 ಗಂಟೆಗೆ ವಿಜಯಪುರ ಜಿಲ್ಲೆಯಿಂದ ಪ್ರಯಾಣ ಬೆಳೆಸಿದ್ದರು. ಚಿತ್ರದುರ್ಗ ಸಮೀಪದ ಮಲ್ಲಾಪುರ ಸಮೀಪ ಭಾನುವಾರ ನಸುಕಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮಧುಸೂದನ್ ಮೃತಪಟ್ಟಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.