<p><strong>ಚಳ್ಳಕೆರೆ (ಚಿತ್ರದುರ್ಗ):</strong> ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (ಆರ್ಎಸ್ಐ) ಮೃತಪಟ್ಟಿದ್ದಾರೆ. </p><p>ಮಂಜುನಾಥ್ (32), ಅಮರೇಶ್ (25) ಹಾಗೂ ಸಚಿನ್ (31) ಸಾವಿಗೀಡಾದವರು. </p><p>ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಬಳ್ಳಾರಿಗೆ ಹೊರಟಿದ್ದರು. ಇವರಿದ್ದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸಬ್ ಇನ್ಸ್ಪೆಕ್ಟರ್ ಈಶ್ವರ್, ಆರ್ಎಸ್ಐ ಮಹಾಂತೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಎಲ್ಲರೂ ಪೊಲೀಸ್ ಇಲಾಖೆಗೆ ಹೊಸದಾಗಿ ನೇಮಕವಾಗಿದ್ದರು. ಒಬ್ಬರು ಮೈಸೂರಿನಲ್ಲಿ, ಉಳಿದ ನಾಲ್ವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.</p><p>ಗೃಹ ಸಚಿವ ಡಾ.ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಎಸ್ಪಿ ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><blockquote>ಮೂವರ ಸಾವು ನೋವಿನ ವಿಚಾರ. ಇವರು ಕರ್ತವ್ಯದಲ್ಲಿದ್ದರೇ ಅಥವಾ ರಜೆ ಮೇಲಿದ್ದರೆ ಎಂದು ಪರಿಶೀಲಿಸಲಾಗುವುದು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ನೆರವು ಒದಗಿಸಲಾಗುವುದು.</blockquote><span class="attribution">-ಡಾ.ಜಿ.ಪರಮೇಶ್ವರ, ಗೃಹ ಸಚಿವ</span></div>.ಚಿತ್ರದುರ್ಗ: ನಿರ್ವಹಣೆ ಕೊರತೆಗೆ ನಲುಗಿದ ತೋಟಗಾರಿಕಾ ಕ್ಷೇತ್ರ.ಚಿತ್ರದುರ್ಗ: ಅಳತೆಯಲ್ಲಿ ಮೋಸ, ಹೂವು ಬೆಳೆಗಾರರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ (ಚಿತ್ರದುರ್ಗ):</strong> ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (ಆರ್ಎಸ್ಐ) ಮೃತಪಟ್ಟಿದ್ದಾರೆ. </p><p>ಮಂಜುನಾಥ್ (32), ಅಮರೇಶ್ (25) ಹಾಗೂ ಸಚಿನ್ (31) ಸಾವಿಗೀಡಾದವರು. </p><p>ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಬಳ್ಳಾರಿಗೆ ಹೊರಟಿದ್ದರು. ಇವರಿದ್ದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸಬ್ ಇನ್ಸ್ಪೆಕ್ಟರ್ ಈಶ್ವರ್, ಆರ್ಎಸ್ಐ ಮಹಾಂತೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಎಲ್ಲರೂ ಪೊಲೀಸ್ ಇಲಾಖೆಗೆ ಹೊಸದಾಗಿ ನೇಮಕವಾಗಿದ್ದರು. ಒಬ್ಬರು ಮೈಸೂರಿನಲ್ಲಿ, ಉಳಿದ ನಾಲ್ವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.</p><p>ಗೃಹ ಸಚಿವ ಡಾ.ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಎಸ್ಪಿ ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><blockquote>ಮೂವರ ಸಾವು ನೋವಿನ ವಿಚಾರ. ಇವರು ಕರ್ತವ್ಯದಲ್ಲಿದ್ದರೇ ಅಥವಾ ರಜೆ ಮೇಲಿದ್ದರೆ ಎಂದು ಪರಿಶೀಲಿಸಲಾಗುವುದು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ನೆರವು ಒದಗಿಸಲಾಗುವುದು.</blockquote><span class="attribution">-ಡಾ.ಜಿ.ಪರಮೇಶ್ವರ, ಗೃಹ ಸಚಿವ</span></div>.ಚಿತ್ರದುರ್ಗ: ನಿರ್ವಹಣೆ ಕೊರತೆಗೆ ನಲುಗಿದ ತೋಟಗಾರಿಕಾ ಕ್ಷೇತ್ರ.ಚಿತ್ರದುರ್ಗ: ಅಳತೆಯಲ್ಲಿ ಮೋಸ, ಹೂವು ಬೆಳೆಗಾರರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>