ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್
ಗೋಷ್ಠಿಯಲ್ಲಿ ವಿಷಯಾವಲೋಕನ ಮಾಡಿದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ಕನ್ನಡ ಸಾಹಿತ್ಯ ಸಂಸ್ಕೃತಿ ಗೋಷ್ಠಿಯ ಸಾನಿಧ್ಯವಹಿಸಿದ್ದ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಜಿಲ್ಲೆಯ ಕನ್ನಡದ ಅಸ್ಮಿತೆಯಾಗಿರುವ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಹಾಗೇ ಕನ್ನಡ ಕಟ್ಟುವ ಕೆಲಸಕ್ಕೆ ಜಿಲ್ಲಾಡಳಿತ ಮತ್ತು ಸರ್ಕಾರ ಪೂರಕವಾಗಿ ಸ್ಪಂದಿಸಬೇಕು.
ಬಂಜಗೆರೆ ಜಯಪ್ರಕಾಶ್ ಚಿಂತಕ
ಭದ್ರಾ ಮೇಲ್ದಂಡೆ ಯೋಜನೆ ಸಂಪೂರ್ಣ ಅನುಷ್ಠಾನಕ್ಕೆ ಪಕ್ಷಾತೀತವಾಗಿ ಹೋರಾಟ ನಡೆಸಲು ನಾವು ಸಿದ್ಧರಿದ್ದೇವೆ. ಈ ಕಾರ್ಯಕ್ಕೆ ಸಂಸದ ಗೋವಿಂದ ಕಾರಜೋಳ ಸಂಪೂರ್ಣವಾಗಿ ಕೈಜೋಡಿಸಲು ಜನರು ಒತ್ತಾಯಿಸಬೇಕು.
ಎಚ್.ಆಂಜನೇಯ ಮಾಜಿ ಸಚಿವಐದು ನಿರ್ಣಯ ಮಂಡನೆ
ಸಮ್ಮೇಳನದಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಂಡಿಸಿದರು.
ಕವಿಗೋಷ್ಠಿಯಲ್ಲಿ ಉತ್ಸಾಹ
ಸಾಹಿತಿ ಷರೀಫಾ ಬಿ. ಅಧ್ಯಕ್ಷತೆಯಲ್ಲಿ ಸಮ್ಮೇಳನದ ಕವಿಗೋಷ್ಠಿ ನಡೆಯಿತು. ಮಹಿಳಾ ಕವಿಗಳ ಬಲ ವೇದಿಕೆ ಮೇಲೆ ಹೆಚ್ಚಾಗಿತ್ತು. ಸಾಲು ಮರದ ತಿಮ್ಮಕ್ಕ ಕನ್ನಡ ನಾಡು ನುಡಿ ಸ್ತ್ರೀಲೋಕ ಹಾಗೂ ಸಾಮಾಜಿಕ ಸಮಸ್ಯೆಗಳು ಕವನಗಳಲ್ಲಿ ಅನಾವರಣಗೊಂಡವು. 40ಕ್ಕೂ ಹೆಚ್ಚು ಯುವ ಉತ್ಸಾಹಿ ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದ್ದು ವಿಶೇಷವಾಗಿತ್ತು.