<p><strong>ಚಿತ್ರದುರ್ಗ:</strong> ‘ಸರಳವಾದ ಬದುಕು ನಮ್ಮದಾಗಿದ್ದಾರೆ ನೆಮ್ಮದಿಯು ಹುಡುಕಿಕೊಂಡು ಬರುತ್ತದೆ. ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ ಸುಂದರ ಬದುಕು ಕಟ್ಟಿಕೊಳ್ಳಿ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಮುರುಘಾ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದರು.</p>.<p>‘ದುಡಿಯದೆ ಇರುವ ದುಡ್ಡು ನಮಗೆ ಶ್ರೀಮಂತಿಕೆ ಕೊಡಬಹುದು. ಆದರೆ ಅದರಿಂದ ನೆಮ್ಮದಿ ಸಿಗುವುದಿಲ್ಲ. ಚಿತ್ರದುರ್ಗದವರೇ ಆದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರು ತಮಗಾಗಿ ಏನೂ ಮಾಡಿಕೊಳ್ಳದೆ ಮಾದರಿಯಾಗಿದ್ದಾರೆ. ಇಂತಹ ನ್ಯಾಯಯುತ ಬದುಕು ನಮ್ಮದಾಗಬೇಕು’ ಎಂದು ತಿಳಿಸಿದರು.</p>.<p>‘ಬಸವಣ್ಣನವರು ಹೇಳುವಂತೆ ಪರ ಧನಕ್ಕೆ ಅಂಜಬೇಕು. ಹಣ, ಅಧಿಕಾರ, ಬಂಗಾರವನ್ನು ತಿನ್ನಲು ಸಾಧ್ಯವಿಲ್ಲ. ಹಸಿವಾದಾಗ ಅನ್ನವನ್ನೇ ಸೇವಿಸಬೇಕು. ನವ ವಧು-ವರರು ಸತ್ಯಶುದ್ಧ ಕಾಯಕ ಮಾಡುತ್ತ ಸರಳವಾದ ಜೀವನ ಮಾಡಬೇಕು’ ಎಂದರು.</p>.<p>‘ಶಿಕ್ಷಕರು ನಮ್ಮ ಜೀವನದ ಶಿಲ್ಪಿಗಳು. ಪ್ರತಿಯೊಬ್ಬರ ಬದುಕನ್ನು ಉದ್ಧರಿಸುವ ವೃತ್ತಿ ಪವಿತ್ರವಾದುದು’ ಎಂದು ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>7 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು. ಕಲಾವಿದ ಗಂಜಿಗಟ್ಟೆ ಕೃಷ್ಣಮೂರ್ತಿ, ಚಿನ್ಮಯ ದೇವರು, ಟಿ.ಪಿ. ಜ್ಞಾನಮೂರ್ತಿ ಇದ್ದರು.</p>.<div><blockquote>ಅತ್ತೆ ಮತ್ತು ಸೊಸೆ ತಾಯಿ-ಮಗಳಂತೆ ಇರಬೇಕು. ಜೀವನದಲ್ಲಿ ಸುಖವೇ ಬರಲಿ ದುಃಖವೇ ಘಟಿಸಲಿ ಸಮಾಧಾನವಾಗಿ ತೆಗೆದುಕೊಳ್ಳಬೇಕು. ಇಲ್ಲವಾದರೆ ಜೀವನ ಏರುಪೇರಾಗುತ್ತದೆ. ಒಬ್ಬರನ್ನೊಬ್ಬರು ಪರಸ್ಪರ ಅರಿತು ನಡೆಯಬೇಕು. </blockquote><span class="attribution">ಬಸವಪ್ರಭು ಸ್ವಾಮೀಜಿ ದಾವಣಗೆರೆ ವಿರಕ್ತಮಠ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಸರಳವಾದ ಬದುಕು ನಮ್ಮದಾಗಿದ್ದಾರೆ ನೆಮ್ಮದಿಯು ಹುಡುಕಿಕೊಂಡು ಬರುತ್ತದೆ. ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ ಸುಂದರ ಬದುಕು ಕಟ್ಟಿಕೊಳ್ಳಿ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಮುರುಘಾ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದರು.</p>.<p>‘ದುಡಿಯದೆ ಇರುವ ದುಡ್ಡು ನಮಗೆ ಶ್ರೀಮಂತಿಕೆ ಕೊಡಬಹುದು. ಆದರೆ ಅದರಿಂದ ನೆಮ್ಮದಿ ಸಿಗುವುದಿಲ್ಲ. ಚಿತ್ರದುರ್ಗದವರೇ ಆದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರು ತಮಗಾಗಿ ಏನೂ ಮಾಡಿಕೊಳ್ಳದೆ ಮಾದರಿಯಾಗಿದ್ದಾರೆ. ಇಂತಹ ನ್ಯಾಯಯುತ ಬದುಕು ನಮ್ಮದಾಗಬೇಕು’ ಎಂದು ತಿಳಿಸಿದರು.</p>.<p>‘ಬಸವಣ್ಣನವರು ಹೇಳುವಂತೆ ಪರ ಧನಕ್ಕೆ ಅಂಜಬೇಕು. ಹಣ, ಅಧಿಕಾರ, ಬಂಗಾರವನ್ನು ತಿನ್ನಲು ಸಾಧ್ಯವಿಲ್ಲ. ಹಸಿವಾದಾಗ ಅನ್ನವನ್ನೇ ಸೇವಿಸಬೇಕು. ನವ ವಧು-ವರರು ಸತ್ಯಶುದ್ಧ ಕಾಯಕ ಮಾಡುತ್ತ ಸರಳವಾದ ಜೀವನ ಮಾಡಬೇಕು’ ಎಂದರು.</p>.<p>‘ಶಿಕ್ಷಕರು ನಮ್ಮ ಜೀವನದ ಶಿಲ್ಪಿಗಳು. ಪ್ರತಿಯೊಬ್ಬರ ಬದುಕನ್ನು ಉದ್ಧರಿಸುವ ವೃತ್ತಿ ಪವಿತ್ರವಾದುದು’ ಎಂದು ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>7 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು. ಕಲಾವಿದ ಗಂಜಿಗಟ್ಟೆ ಕೃಷ್ಣಮೂರ್ತಿ, ಚಿನ್ಮಯ ದೇವರು, ಟಿ.ಪಿ. ಜ್ಞಾನಮೂರ್ತಿ ಇದ್ದರು.</p>.<div><blockquote>ಅತ್ತೆ ಮತ್ತು ಸೊಸೆ ತಾಯಿ-ಮಗಳಂತೆ ಇರಬೇಕು. ಜೀವನದಲ್ಲಿ ಸುಖವೇ ಬರಲಿ ದುಃಖವೇ ಘಟಿಸಲಿ ಸಮಾಧಾನವಾಗಿ ತೆಗೆದುಕೊಳ್ಳಬೇಕು. ಇಲ್ಲವಾದರೆ ಜೀವನ ಏರುಪೇರಾಗುತ್ತದೆ. ಒಬ್ಬರನ್ನೊಬ್ಬರು ಪರಸ್ಪರ ಅರಿತು ನಡೆಯಬೇಕು. </blockquote><span class="attribution">ಬಸವಪ್ರಭು ಸ್ವಾಮೀಜಿ ದಾವಣಗೆರೆ ವಿರಕ್ತಮಠ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>