<p><strong>ರಾಂಪುರ (ಚಿತ್ರದುರ್ಗ): </strong>ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಚಿತ್ರದುರ್ಗ ಜಿಲ್ಲೆಯ ಗಡಿ ತಲುಪಿದ್ದು, ಬಳ್ಳಾರಿ ಜಿಲ್ಲೆಯತ್ತ ಹೊರಟಿದೆ. ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಶುಕ್ರವಾರ ಕಾಲ್ನಡಿಗೆ ಆರಂಭವಾಗಿದೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಜಿಲ್ಲೆಯಲ್ಲಿ ಐದನೇ ದಿನ ನಡೆಯುತ್ತಿದೆ. ನಿಗದಿಯಂತೆ ಬೆಳಿಗ್ಗೆ 6.30ಕ್ಕೆ ಆರಂಭವಾಗಬೇಕಿದ್ದ ಪಾದಯಾತ್ರೆ 45 ನಿಮಿಷ ವಿಳಂಬವಾಗಿ ಹೊರಟಿದೆ. ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯ ಕಣಕುಪ್ಪೆ ತಲುಪಲಿದ್ದು, ಅಲ್ಲಿಂದ ಆಂಧ್ರಪ್ರದೇಶದ ಗ್ರಾಮವೊಂದರ ಮೂಲಕ ಬೆಳಿಗ್ಗೆ10 ಗಂಟೆಗೆ ಬಳ್ಳಾರಿ ಜಿಲ್ಲೆ ಪ್ರವೇಶಿಸಲಿದೆ.</p>.<p>ಜೋಡೊ ಯಾತ್ರೆ ಸಾಗುವ ಮಾರ್ಗ ಸಿಂಗಾರಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಲ್ಲಿ ಹೆಜ್ಜೆ ಹಾಕಿದರು. ನಸುಕಿನಲ್ಲೇ ಸೇರಿದ ಅಪಾರ ಪ್ರಮಾಣದ ಜನರು ರಾಹುಲ್ ಪರ ಘೋಷಣೆ ಮೊಳಗಿಸಿದರು. ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಹಸಿರು ಶಾಲು ಹೊದ್ದು ಕಾಲ್ನಡಿಗೆಯಲ್ಲಿ ಸಾಗಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ಹಲವು ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.</p>.<p>ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂಲಕ ಅ.10ರಂದು ಯಾತ್ರೆ ಚಿತ್ರದುರ್ಗ ಜಿಲ್ಲೆಯನ್ನು ಪ್ರವೇಶಿಸಿತ್ತು. ಹಿರಿಯೂರು, ಚಳ್ಳಕೆರೆ ತಾಲ್ಲೂಕಿನ ಮೂಲಕ ಗುರುವಾರ ಮೊಳಕಾಲ್ಮುರು ತಲುಪಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ (ಚಿತ್ರದುರ್ಗ): </strong>ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಚಿತ್ರದುರ್ಗ ಜಿಲ್ಲೆಯ ಗಡಿ ತಲುಪಿದ್ದು, ಬಳ್ಳಾರಿ ಜಿಲ್ಲೆಯತ್ತ ಹೊರಟಿದೆ. ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಶುಕ್ರವಾರ ಕಾಲ್ನಡಿಗೆ ಆರಂಭವಾಗಿದೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಜಿಲ್ಲೆಯಲ್ಲಿ ಐದನೇ ದಿನ ನಡೆಯುತ್ತಿದೆ. ನಿಗದಿಯಂತೆ ಬೆಳಿಗ್ಗೆ 6.30ಕ್ಕೆ ಆರಂಭವಾಗಬೇಕಿದ್ದ ಪಾದಯಾತ್ರೆ 45 ನಿಮಿಷ ವಿಳಂಬವಾಗಿ ಹೊರಟಿದೆ. ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯ ಕಣಕುಪ್ಪೆ ತಲುಪಲಿದ್ದು, ಅಲ್ಲಿಂದ ಆಂಧ್ರಪ್ರದೇಶದ ಗ್ರಾಮವೊಂದರ ಮೂಲಕ ಬೆಳಿಗ್ಗೆ10 ಗಂಟೆಗೆ ಬಳ್ಳಾರಿ ಜಿಲ್ಲೆ ಪ್ರವೇಶಿಸಲಿದೆ.</p>.<p>ಜೋಡೊ ಯಾತ್ರೆ ಸಾಗುವ ಮಾರ್ಗ ಸಿಂಗಾರಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಲ್ಲಿ ಹೆಜ್ಜೆ ಹಾಕಿದರು. ನಸುಕಿನಲ್ಲೇ ಸೇರಿದ ಅಪಾರ ಪ್ರಮಾಣದ ಜನರು ರಾಹುಲ್ ಪರ ಘೋಷಣೆ ಮೊಳಗಿಸಿದರು. ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಹಸಿರು ಶಾಲು ಹೊದ್ದು ಕಾಲ್ನಡಿಗೆಯಲ್ಲಿ ಸಾಗಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ಹಲವು ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.</p>.<p>ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂಲಕ ಅ.10ರಂದು ಯಾತ್ರೆ ಚಿತ್ರದುರ್ಗ ಜಿಲ್ಲೆಯನ್ನು ಪ್ರವೇಶಿಸಿತ್ತು. ಹಿರಿಯೂರು, ಚಳ್ಳಕೆರೆ ತಾಲ್ಲೂಕಿನ ಮೂಲಕ ಗುರುವಾರ ಮೊಳಕಾಲ್ಮುರು ತಲುಪಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>