<p><strong>ಸಿರಿಗೆರೆ</strong>: ‘ಭೀಮಸಮುದ್ರದ ಸಮೀಪ ಇರುವ ಗುಡ್ಡಗಳಲ್ಲಿ ವ್ಯಾಪಕ ಗಣಿಗಾರಿಕೆ ನಡೆಸುತ್ತಿರುವುದನ್ನು ವಿರೋಧಿಸಿ ಭೀಮಸಮುದ್ರದಿಂದ ಜಿಲ್ಲಾ ಕೇಂದ್ರಕ್ಕೆ ಜೂ.1ರಂದು ಪಾದಯಾತ್ರೆ ನಡೆಸಲು ರೈತ ಸಂಘ ಮುಂದಾಗಿದೆ’ ಎಂದು ಮುಖಂಡ ಡಿ.ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ.</p>.<p>‘ಗಣಿಗಾರಿಕೆಯನ್ನು ವಿರೋಧಿಸಿ ಹಲವು ಹಂತಗಳಲ್ಲಿ ಹೋರಾಟ ಮಾಡಿದ್ದೇವೆ. ಗಣಿಬಾಧಿತ ಪ್ರದೇಶದ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ. ನಿತ್ಯವೂ ಓಡಾಡುವ ನೂರಾರು ಲಾರಿಗಳಿಂದ ಹರಡುವ ದೂಳಿನಿಂದ ಜನರ ಬದುಕು ಹದಗೆಟ್ಟಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>‘ಪಾದಯಾತ್ರೆಯಲ್ಲಿ ಗಣಿಬಾಧಿತ ಪ್ರದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-2002114562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ‘ಭೀಮಸಮುದ್ರದ ಸಮೀಪ ಇರುವ ಗುಡ್ಡಗಳಲ್ಲಿ ವ್ಯಾಪಕ ಗಣಿಗಾರಿಕೆ ನಡೆಸುತ್ತಿರುವುದನ್ನು ವಿರೋಧಿಸಿ ಭೀಮಸಮುದ್ರದಿಂದ ಜಿಲ್ಲಾ ಕೇಂದ್ರಕ್ಕೆ ಜೂ.1ರಂದು ಪಾದಯಾತ್ರೆ ನಡೆಸಲು ರೈತ ಸಂಘ ಮುಂದಾಗಿದೆ’ ಎಂದು ಮುಖಂಡ ಡಿ.ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ.</p>.<p>‘ಗಣಿಗಾರಿಕೆಯನ್ನು ವಿರೋಧಿಸಿ ಹಲವು ಹಂತಗಳಲ್ಲಿ ಹೋರಾಟ ಮಾಡಿದ್ದೇವೆ. ಗಣಿಬಾಧಿತ ಪ್ರದೇಶದ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ. ನಿತ್ಯವೂ ಓಡಾಡುವ ನೂರಾರು ಲಾರಿಗಳಿಂದ ಹರಡುವ ದೂಳಿನಿಂದ ಜನರ ಬದುಕು ಹದಗೆಟ್ಟಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>‘ಪಾದಯಾತ್ರೆಯಲ್ಲಿ ಗಣಿಬಾಧಿತ ಪ್ರದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-2002114562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>