<p><strong>ಚಿತ್ರದುರ್ಗ</strong>: ಹಳೇ ವೈಷಮ್ಯದ ಕಾರಣ, ತಾಲ್ಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ಗುರುವಾರ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸುವದಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಭೀಮಸಮುದ್ರ ಕ್ಯಾಂಪ್ ಗ್ರಾಮದ ಕಾಂತರಾಜ್ (35) ಕೊಲೆಯಾದ ವ್ಯಕ್ತಿ. ಆರೋಪಿ ನರಸಿಂಹಪ್ಪನನ್ನು (57) ಪೊಲೀಸರು ಬಂಧಿಸಿದ್ದಾರೆ. 2020ರಲ್ಲಿ ಕಾಂತರಾಜ್ ಹಾಗೂ ನರಸಿಂಹಪ್ಪ ನಡುವೆ ಗಲಾಟೆ ನಡೆದಿತ್ತು. ನರಸಿಂಹಪ್ಪನ ಮೇಲೆ ಕಾಂತರಾಜ್ ಹಲ್ಲೆ ನಡೆಸಿದ್ದ ಕಾರಣಕ್ಕೆ ದೂರು ದಾಖಲಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.</p>.<p>₹20,000 ಹಣ ನೀಡಿ ರಾಜೀ ಮಾಡಿಕೊಳ್ಳುವಂತೆ ನರಸಿಂಹಪ್ಪ ಕೋರಿದ್ದರು. ಇದಕ್ಕೆ ಕಾಂತರಾಜ್ ಒಪ್ಪಿರಲಿಲ್ಲ. ಇದರಿಂದ ಕಾಂತರಾಜ್ ಜೊತೆಗೆ ಗಲಾಟೆ ತೆಗೆದು ಗುರುವಾರ ಅವರ ತಲೆಗೆ ಕಲ್ಲಿನಿಂದ ಜಜ್ಜಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾಂತರಾಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಮೃತಪಟ್ಟರು.</p>.<p>ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಹಳೇ ವೈಷಮ್ಯದ ಕಾರಣ, ತಾಲ್ಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ಗುರುವಾರ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸುವದಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಭೀಮಸಮುದ್ರ ಕ್ಯಾಂಪ್ ಗ್ರಾಮದ ಕಾಂತರಾಜ್ (35) ಕೊಲೆಯಾದ ವ್ಯಕ್ತಿ. ಆರೋಪಿ ನರಸಿಂಹಪ್ಪನನ್ನು (57) ಪೊಲೀಸರು ಬಂಧಿಸಿದ್ದಾರೆ. 2020ರಲ್ಲಿ ಕಾಂತರಾಜ್ ಹಾಗೂ ನರಸಿಂಹಪ್ಪ ನಡುವೆ ಗಲಾಟೆ ನಡೆದಿತ್ತು. ನರಸಿಂಹಪ್ಪನ ಮೇಲೆ ಕಾಂತರಾಜ್ ಹಲ್ಲೆ ನಡೆಸಿದ್ದ ಕಾರಣಕ್ಕೆ ದೂರು ದಾಖಲಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.</p>.<p>₹20,000 ಹಣ ನೀಡಿ ರಾಜೀ ಮಾಡಿಕೊಳ್ಳುವಂತೆ ನರಸಿಂಹಪ್ಪ ಕೋರಿದ್ದರು. ಇದಕ್ಕೆ ಕಾಂತರಾಜ್ ಒಪ್ಪಿರಲಿಲ್ಲ. ಇದರಿಂದ ಕಾಂತರಾಜ್ ಜೊತೆಗೆ ಗಲಾಟೆ ತೆಗೆದು ಗುರುವಾರ ಅವರ ತಲೆಗೆ ಕಲ್ಲಿನಿಂದ ಜಜ್ಜಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾಂತರಾಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಮೃತಪಟ್ಟರು.</p>.<p>ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>