<p>ಚಿತ್ರದುರ್ಗ: ‘ಭೋವಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಈಗ ಹತ್ತು ವರ್ಷ ಪೂರೈಸುತ್ತಿದ್ದು, ದಶಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ನಿಗಮದಿಂದ ಹಸು ಸಾಕಾಣಿಕೆ ಸಾಲ, ₹ 1 ಲಕ್ಷ ನೇರ ಸಾಲ, ಗಂಗಾ ಕಲ್ಯಾಣ ಯೋಜನೆ, ಸಾರಥಿ ವಾಹನ ಸೌಲಭ್ಯ ಸಾಲ ಹಾಗೂ ಮಹಿಳಾ ಸಂಘಗಳಿಗೆ ₹ 5 ಲಕ್ಷದವರೆಗೆ ಸಾಲ ಸೇರಿದಂತೆ ಒಟ್ಟು 6 ಭಾಗ್ಯಗಳನ್ನು ನೀಡಲಾಗುತ್ತಿದೆ’ ಎಂದು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ತಿಳಿಸಿದರು.</p>.<p>ನಗರದ ಚಳ್ಳಕೆರೆ ರಸ್ತೆಯ ಬಾಲಾಜಿ ಲೇಔಟ್ನ ಮದರ್ ತೆರೆಸಾ ವಿದ್ಯಾಸಂಸ್ಥೆಯಲ್ಲಿ ಶನಿವಾರ ಭೋವಿ ಅಭಿವೃದ್ಧಿ ನಿಗಮದಿಂದ ನಡೆದ ಯುವಕ, ಯುವತಿಯರಿಗೆ ವಿವಿಧ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು 5 ಗ್ಯಾರಂಟಿ ಯೋಜನೆಗಳನ್ನು ತಲುಪಿಸುತ್ತಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ನಿಗಮ ವಿವಿಧ ತರಬೇತಿ ನೀಡುತ್ತಿದೆ. ಹಿಂದೆ ಹಸು ಹಾಗೂ ಕುರಿ ಸಾಕಾಣಿಕೆಗೆ ಧನಸಹಾಯ ಪಡೆದ ಮಹಿಳೆಯರು ಮತ್ತು ವಿದ್ಯಾವಂತ ಯುವತಿಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ನಮ್ಮ ಜನಾಂಗದವರು ಬೇರೆಯವರನ್ನು ಅವಲಂಬಿಸದೆ ಸ್ವಯಂ ಉದ್ಯೋಗ ಕೈಗೊಳ್ಳಬೇಕು’ ಎಂದರು.</p>.<p>‘ತರಬೇತಿಯ ನಂತರ ನೀಡಲಾಗುವ ಪ್ರಮಾಣಪತ್ರ ನಿಮಗೆ ಉದ್ಯೋಗ ಭದ್ರತೆ ಒದಗಿಸಲಿದೆ. ಒಂದು ವೇಳೆ ಉದ್ಯೋಗ ದೊರೆಯದಿದ್ದರೂ ಸ್ವಯಂ ಉದ್ಯೋಗದ ಮೂಲಕ ಮನೆಗಳಲ್ಲೇ ಸ್ವತಂತ್ರವಾಗಿ ಕೆಲಸ ನಿರ್ವಹಿಸಬಹುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಯುವಕ-ಯುವತಿಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ’ ಎಂದು ಹೇಳಿದರು.</p>.<p>‘ಭೋವಿ ಜನಾಂಗದ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನಿಗಮದ ಯೋಜನೆಗಳು ಪೂರಕವಾಗಿವೆ. ಐಟಿ–ಬಿಟಿ ವಲಯದಲ್ಲಿ ‘ಮನೆಯಿಂದ ಕೆಲಸ’ (ವರ್ಕ್ ಫ್ರಮ್ ಹೋಮ್) ವ್ಯವಸ್ಥೆ ಇರುವಂತೆ, ಯುವಕ-ಯುವತಿಯರು ಮನೆಯಲ್ಲೇ ಇದ್ದು ವಿವಿಧ ಕೆಲಸ ಪ್ರಾರಂಭಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ತರಬೇತಿ ನೆರವಾಗಲಿದೆ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.</p>.<p>‘ಮಹಿಳೆಯರು ಪುರುಷ ಪ್ರಧಾನ ಸಮಾಜದಲ್ಲಿ ಸಮಾನ ಹಕ್ಕು, ಪ್ರಾತಿನಿಧ್ಯ ಪಡೆದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಬಲರಾಗಬೇಕು ಎನ್ನುವುದೇ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮುಖ್ಯ ಉದ್ದೇಶ’ ಎಂದು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ ಹೇಳಿದರು.</p>.<p>‘ರಾಜ್ಯ ಸರ್ಕಾರವು ಬಡವರ ಮತ್ತು ಶೋಷಿತ ಸಮುದಾಯಗಳ ಏಳಿಗೆಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಾಂಗದ ಯುವಕ–ಯುವತಿಯರು ತರಬೇತಿಯ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಶಿವಣ್ಣ ತಿಳಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಘಟಕದ ವ್ಯವಸ್ಥಾಪಕ ವೈ.ರವಿಕುಮಾರ್, ಭೋವಿ ಸಮುದಾಯದ ಮುಖಂಡ ತಿಪ್ಪೇಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-44-865027816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಭೋವಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಈಗ ಹತ್ತು ವರ್ಷ ಪೂರೈಸುತ್ತಿದ್ದು, ದಶಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ನಿಗಮದಿಂದ ಹಸು ಸಾಕಾಣಿಕೆ ಸಾಲ, ₹ 1 ಲಕ್ಷ ನೇರ ಸಾಲ, ಗಂಗಾ ಕಲ್ಯಾಣ ಯೋಜನೆ, ಸಾರಥಿ ವಾಹನ ಸೌಲಭ್ಯ ಸಾಲ ಹಾಗೂ ಮಹಿಳಾ ಸಂಘಗಳಿಗೆ ₹ 5 ಲಕ್ಷದವರೆಗೆ ಸಾಲ ಸೇರಿದಂತೆ ಒಟ್ಟು 6 ಭಾಗ್ಯಗಳನ್ನು ನೀಡಲಾಗುತ್ತಿದೆ’ ಎಂದು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ತಿಳಿಸಿದರು.</p>.<p>ನಗರದ ಚಳ್ಳಕೆರೆ ರಸ್ತೆಯ ಬಾಲಾಜಿ ಲೇಔಟ್ನ ಮದರ್ ತೆರೆಸಾ ವಿದ್ಯಾಸಂಸ್ಥೆಯಲ್ಲಿ ಶನಿವಾರ ಭೋವಿ ಅಭಿವೃದ್ಧಿ ನಿಗಮದಿಂದ ನಡೆದ ಯುವಕ, ಯುವತಿಯರಿಗೆ ವಿವಿಧ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು 5 ಗ್ಯಾರಂಟಿ ಯೋಜನೆಗಳನ್ನು ತಲುಪಿಸುತ್ತಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ನಿಗಮ ವಿವಿಧ ತರಬೇತಿ ನೀಡುತ್ತಿದೆ. ಹಿಂದೆ ಹಸು ಹಾಗೂ ಕುರಿ ಸಾಕಾಣಿಕೆಗೆ ಧನಸಹಾಯ ಪಡೆದ ಮಹಿಳೆಯರು ಮತ್ತು ವಿದ್ಯಾವಂತ ಯುವತಿಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ನಮ್ಮ ಜನಾಂಗದವರು ಬೇರೆಯವರನ್ನು ಅವಲಂಬಿಸದೆ ಸ್ವಯಂ ಉದ್ಯೋಗ ಕೈಗೊಳ್ಳಬೇಕು’ ಎಂದರು.</p>.<p>‘ತರಬೇತಿಯ ನಂತರ ನೀಡಲಾಗುವ ಪ್ರಮಾಣಪತ್ರ ನಿಮಗೆ ಉದ್ಯೋಗ ಭದ್ರತೆ ಒದಗಿಸಲಿದೆ. ಒಂದು ವೇಳೆ ಉದ್ಯೋಗ ದೊರೆಯದಿದ್ದರೂ ಸ್ವಯಂ ಉದ್ಯೋಗದ ಮೂಲಕ ಮನೆಗಳಲ್ಲೇ ಸ್ವತಂತ್ರವಾಗಿ ಕೆಲಸ ನಿರ್ವಹಿಸಬಹುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಯುವಕ-ಯುವತಿಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ’ ಎಂದು ಹೇಳಿದರು.</p>.<p>‘ಭೋವಿ ಜನಾಂಗದ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನಿಗಮದ ಯೋಜನೆಗಳು ಪೂರಕವಾಗಿವೆ. ಐಟಿ–ಬಿಟಿ ವಲಯದಲ್ಲಿ ‘ಮನೆಯಿಂದ ಕೆಲಸ’ (ವರ್ಕ್ ಫ್ರಮ್ ಹೋಮ್) ವ್ಯವಸ್ಥೆ ಇರುವಂತೆ, ಯುವಕ-ಯುವತಿಯರು ಮನೆಯಲ್ಲೇ ಇದ್ದು ವಿವಿಧ ಕೆಲಸ ಪ್ರಾರಂಭಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ತರಬೇತಿ ನೆರವಾಗಲಿದೆ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.</p>.<p>‘ಮಹಿಳೆಯರು ಪುರುಷ ಪ್ರಧಾನ ಸಮಾಜದಲ್ಲಿ ಸಮಾನ ಹಕ್ಕು, ಪ್ರಾತಿನಿಧ್ಯ ಪಡೆದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಬಲರಾಗಬೇಕು ಎನ್ನುವುದೇ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮುಖ್ಯ ಉದ್ದೇಶ’ ಎಂದು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ ಹೇಳಿದರು.</p>.<p>‘ರಾಜ್ಯ ಸರ್ಕಾರವು ಬಡವರ ಮತ್ತು ಶೋಷಿತ ಸಮುದಾಯಗಳ ಏಳಿಗೆಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಾಂಗದ ಯುವಕ–ಯುವತಿಯರು ತರಬೇತಿಯ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಶಿವಣ್ಣ ತಿಳಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಘಟಕದ ವ್ಯವಸ್ಥಾಪಕ ವೈ.ರವಿಕುಮಾರ್, ಭೋವಿ ಸಮುದಾಯದ ಮುಖಂಡ ತಿಪ್ಪೇಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-44-865027816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>