ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 17 ವರ್ಷದ ಬಾಲಕನಿಗೆ ಬಾಲನ್ಯಾಯ ಮಂಡಳಿ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಶಿವಮೂರ್ತಿ ಶರಣರು ಸೇರಿ ನಾಲ್ವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಅ.13ರಂದು ಪ್ರಕರಣ ದಾಖಲಾಗಿತ್ತು. ನ್ಯಾಯಮಂಡಳಿಯ ಎದುರು ಶರಣಾದ ಬಾಲಕ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.