ಮೊಳಕಾಲ್ಮುರು: ತಾಲ್ಲೂಕಿನ ತಮ್ಮೇನಹಳ್ಳಿ ಬಳಿಯ 150 ‘ಎ’ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 4 ಜನ ಗಾಯಗೊಂಡಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಹುಲ್ಸಗೂಡ ಗ್ರಾಮದ ನಾಗೇಂದ್ರ (50) ಮತ್ತು ಕಾರ್ತಿಕ್ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಪದ್ಮಾವತಿ, ಪ್ರಜ್ವಲ್, ಪೃಥ್ವಿ ಮತ್ತು ಕಾರು ಚಾಲಕ ಸೂರ್ಯಕಾಂತ್ ಅವರಿಗೆ ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಾರು ಬೆಂಗಳೂರಿನಿಂದ ಕಲಬುರಗಿ ಕಡೆ ಹೋಗುತ್ತಿತ್ತು. ಚಾಲಕನ ಅತಿವೇಗ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.