<p>ಚಿಕ್ಕಜಾಜೂರು: ಕಲ್ಲವ್ವನಾಗತಿಹಳ್ಳಿ ಗ್ರಾಮದ ವೃದ್ಧರೊಬ್ಬರು ಗ್ರಾಮ ಸಮೀಪದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಿಸಿಲಿನ ತಾಪಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ದೂರಿದ್ದಾರೆ.</p>.<p>ಗ್ರಾಮದ ಕೆ.ತಿಪ್ಪೇರುದ್ರಪ್ಪ (80) ಮೃತ ವೃದ್ಧ. ವಯೋಸಹಜವಾಗಿ ಮರೆವಿನ ಕಾಯಿಲೆ ಇದ್ದ ಕಾರಣ ಅವರು ಆಗಾಗ ಮನೆ ಬಿಟ್ಟು ಹೋಗುತ್ತಿದ್ದರು. ಕುಟುಂಬ ಸದಸ್ಯರು ಹುಡುಕಿ ಮನೆಗೆ ಕರೆದುಕೊಂಡು ಬರುತ್ತಿದ್ದರು.</p>.<p>‘ಮೇ 3ರಂದು ತಿಪ್ಪೇರುದ್ರಪ್ಪ ಮನೆ ಬಿಟ್ಟು ಹೋಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದಾಗ ಬಿ. ದುರ್ಗ ಗ್ರಾಮದ ಜಮೀನೊಂದರಲ್ಲಿ ಮೃತಪಟ್ಟಿರುವ ವಿಷಯ ಬುಧವಾರ ಗೊತ್ತಾಗಿದೆ. ಬೆಳಕಿಗೆ ಬಂದಿದೆ. ನಮ್ಮ ತಂದೆ 2 ದಿನಗಳಿಂದ ಊಟವಿಲ್ಲದೇ ಬಳಲಿದ್ದಾರೆ. ಬಿಸಿಲಿನಿಂದ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ’ ಎಂದು ಪುತ್ರ ಕೆ.ಟಿ. ಪ್ರಕಾಶ್ ಚಿಕ್ಕಜಾಜೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಬಿಸಿಲಿನ ವಾತಾವರಣದಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ’ ಎಂದು ಚಿಕ್ಕಜಾಜೂರು ಠಾಣೆ ಸಬ್ ಇನ್ಸ್ಪೆಕ್ಟರ್ ಗಾದಿಲಿಂಗಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-44-857074357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಜಾಜೂರು: ಕಲ್ಲವ್ವನಾಗತಿಹಳ್ಳಿ ಗ್ರಾಮದ ವೃದ್ಧರೊಬ್ಬರು ಗ್ರಾಮ ಸಮೀಪದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಿಸಿಲಿನ ತಾಪಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ದೂರಿದ್ದಾರೆ.</p>.<p>ಗ್ರಾಮದ ಕೆ.ತಿಪ್ಪೇರುದ್ರಪ್ಪ (80) ಮೃತ ವೃದ್ಧ. ವಯೋಸಹಜವಾಗಿ ಮರೆವಿನ ಕಾಯಿಲೆ ಇದ್ದ ಕಾರಣ ಅವರು ಆಗಾಗ ಮನೆ ಬಿಟ್ಟು ಹೋಗುತ್ತಿದ್ದರು. ಕುಟುಂಬ ಸದಸ್ಯರು ಹುಡುಕಿ ಮನೆಗೆ ಕರೆದುಕೊಂಡು ಬರುತ್ತಿದ್ದರು.</p>.<p>‘ಮೇ 3ರಂದು ತಿಪ್ಪೇರುದ್ರಪ್ಪ ಮನೆ ಬಿಟ್ಟು ಹೋಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದಾಗ ಬಿ. ದುರ್ಗ ಗ್ರಾಮದ ಜಮೀನೊಂದರಲ್ಲಿ ಮೃತಪಟ್ಟಿರುವ ವಿಷಯ ಬುಧವಾರ ಗೊತ್ತಾಗಿದೆ. ಬೆಳಕಿಗೆ ಬಂದಿದೆ. ನಮ್ಮ ತಂದೆ 2 ದಿನಗಳಿಂದ ಊಟವಿಲ್ಲದೇ ಬಳಲಿದ್ದಾರೆ. ಬಿಸಿಲಿನಿಂದ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ’ ಎಂದು ಪುತ್ರ ಕೆ.ಟಿ. ಪ್ರಕಾಶ್ ಚಿಕ್ಕಜಾಜೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಬಿಸಿಲಿನ ವಾತಾವರಣದಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ’ ಎಂದು ಚಿಕ್ಕಜಾಜೂರು ಠಾಣೆ ಸಬ್ ಇನ್ಸ್ಪೆಕ್ಟರ್ ಗಾದಿಲಿಂಗಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-44-857074357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>