ಘಟನೆಯ ವಿವರ: ‘ಚಿತ್ರದುರ್ಗ ಉಪ ನೋಂದಣಿ ಕಚೇರಿಯಲ್ಲಿ 2020 ಅ. 28 ರಿಂದ 2021 ಆ. 31ರ ವರೆಗಿನ ಅವಧಿಯಲ್ಲಿ ಸಹಿ ಮಾಡಿರುವ ಎಲ್ಲ ದಸ್ತಾವೇಜುಗಳು ಕಾನೂನುಬಾಹಿರವಾಗಿವೆ. ಸಿ. ಮಂಜುನಾಥ ಯಾದವ್ ಚಿತ್ರದುರ್ಗದ ಆಕ್ಸಿಸ್ ಮತ್ತು ಐಸಿಐಸಿಐ ಬ್ಯಾಂಕ್ ಶಾಖೆಗಳ ಖಾತೆಯಿಂದ ದಸ್ತಾವೇಜುಗಳ ಮೌಲ್ಯಕ್ಕೆ ಅನುಗುಣವಾಗಿ ಸರ್ಕಾರಿ ಶುಲ್ಕವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಾನಾ ಲೆಕ್ಕ ಶೀರ್ಷಿಕೆಗಳಲ್ಲಿ ಇ-ಪೇಮೆಂಟ್ ಮೂಲಕ ಕಡಿಮೆ ಶುಲ್ಕ ಪಾವತಿಸಿ ಸರಿಯಾದ ಶುಲ್ಕ ಪಾವತಿಸಿರುವಂತೆ ಕೆ-2 ಚಲನ್ ತಿದ್ದಿ ಸರ್ಕಾರಕ್ಕೆ ₹ 1,67,71,170ಗಳಷ್ಟು ಕಂದಾಯ ವಂಚಿಸಿದ್ದಾನೆ’ ಎಂದು ಜಿಲ್ಲಾ ನೋಂದಣಾಧಿಕಾರಿ ರವೀಂದ್ರ ಪೂಜಾರ್ ಅವರು ಆರೋಪಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.