ಪ್ರವಾಸಿಗರಿಗೆ ವಿಶ್ರಾಂತಿಧಾಮ, ಉದ್ಯಾನ, ಪ್ರವಾಸಿ ಮಂದಿರ, ಹೈಟೆಕ್ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗೆ 2014ರಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ. ದೇಶಪಾಂಡೆ ಶಂಕುಸ್ಥಾಪನೆ ನೆರವೇರಿಸಿದ್ದರು. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ನಿರ್ಮಿತಿ ಕೇಂದ್ರಕ್ಕೆ ತಾಕೀತು ಮಾಡಲಾಗಿತ್ತು. ಆದರೆ, ಒಂಭತ್ತು ವರ್ಷಗಳು ಕಳೆದರೂ ನಿರ್ಮಿತಿ ಕೇಂದ್ರದವರು ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.