<p>ಚಿತ್ರದುರ್ಗ: ‘ಅಂಗವಿಕಲರ ನಕಲಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚಿಸುವ ವ್ಯಕ್ತಿಗಳು ಮತ್ತು ಅದಕ್ಕೆ ಸಹಕರಿಸುವ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಜತೆಗೆ ವಂಚನೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲರ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗವಿಕಲತೆ ಇಲ್ಲದಿದ್ದರೂ ನಕಲಿ ಪ್ರಮಾಣಪತ್ರ ಪಡೆದು ಸರ್ಕಾರಿ ಸೌಲಭ್ಯ ಮತ್ತು ಉದ್ಯೋಗ ಪಡೆದಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಅಕ್ರಮ ಕಂಡು ಬಂದಲ್ಲಿ ಲಿಖಿತ ದೂರು ನೀಡಿದರೆ, ತಜ್ಞ ವೈದ್ಯರ ಸಮಿತಿಯಿಂದ ಮರು ತಪಾಸಣೆಗೆ ಒಳಪಡಿಸಿ ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಅಂಗವಿಕಲರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯಬಾರದು. ಅವರ ಸಮಸ್ಯೆಗಳನ್ನು ಆಲಿಸಿ, ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ತಕ್ಷಣವೇ ಸೌಲಭ್ಯ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಇದರಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಗ್ರಾಮ ಪಂಚಾಯಿತಿಗಳು ಸೇರಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಮೀಸಲಿರುವ ಶೇ 5ರಷ್ಟು ಅನುದಾನ ಮತ್ತು ಯೋಜನೆಗಳ ವಿವರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಮೀಸಲಿರುವ ಅನುದಾನದ ಬಳಕೆ ಮತ್ತು ಸೌಲಭ್ಯಗಳ ವಿತರಣೆಯಲ್ಲಿ ಆಗುತ್ತಿರುವ ಲೋಪದೋಷ ಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಅಂಗವಿಕಲರ ಅಭಿವೃದ್ಧಿಗಾಗಿ ಸರ್ಕಾರ ನೀಡುವ ಅನುದಾನವು ಸಮರ್ಪಕವಾಗಿ ಅವರ ಕೈ ಸೇರಬೇಕು. ಯಾವುದೇ ಪಂಚಾಯಿತಿಗಳು ಮಾಹಿತಿ ನೀಡಲು ನಿರಾಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ತಿಳಿಸಿದರು.</p>.<p>‘ಕೆಎಸ್ಆರ್ಟಿಸಿ ಬಸ್ಪಾಸ್ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ₹ 50 ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಲವೆಡೆ ₹ 100 ಶುಲ್ಕ ಪಡೆಯುತ್ತಿದ್ದಾರೆ’ ಎಂದು ಅಂಗವಿಕಲರು ದೂರಿದರು.</p>.<p>‘ಹೆಚ್ಚು ಶುಲ್ಕ ಪಡೆಯುವ ಗ್ರಾಮ ಒನ್ ಕೇಂದ್ರಗಳ ಬಗ್ಗೆ ದೂರ ನೀಡಿದರೇ, ಕೂಡಲೇ ಅಂತಹ ಕೇಂದ್ರಗಳಿಗೆ ನೀಡಿರುವ ಪರವಾನಗಿ ರದ್ದುಪಡಿಸಲಾಗುತ್ತದೆ. ಪುನರ್ವಸತಿ ಕಾರ್ಯಕರ್ತರ, ಫಲಾನುಭವಿಗಳ ಮನೆಗಳಿಗೆ ತೆರಳಿ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕು. ಯಾರಾದರು ವಿನಾಕಾರಣ ಅಲೆದಾಡಿಸಿದರೇ, ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿ, ಸಂಬಂಧಪಟ್ಟ ಅಧಿಕಾರಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಅವರ ವಿರುದ್ಧವೇ ಕ್ರಮ ಜರುಗಿಸ ಲಾಗುತ್ತದೆ’ ಎಂದು ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಈವರೆಗೆ ಒಟ್ಟು 35,564 ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ವಿತರಿಸಲಾಗಿದೆ. 2,666 ಅರ್ಜಿಗಳು ವೈದ್ಯಕೀಯ ಮಂಡಳಿಯ ಮುಂದೆ ಪರಿಶೀಲನೆಗಾಗಿ ಬಾಕಿ ಇವೆ. ಫಲಾನುಭವಿಗಳಿಗೆ ಕಾರ್ಡ್ ಹಸ್ತಾಂತರಿಸುವ ಮೊದಲೇ ಅವರ ಮಾಹಿತಿಯನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ’ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-101173409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಅಂಗವಿಕಲರ ನಕಲಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚಿಸುವ ವ್ಯಕ್ತಿಗಳು ಮತ್ತು ಅದಕ್ಕೆ ಸಹಕರಿಸುವ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಜತೆಗೆ ವಂಚನೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲರ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗವಿಕಲತೆ ಇಲ್ಲದಿದ್ದರೂ ನಕಲಿ ಪ್ರಮಾಣಪತ್ರ ಪಡೆದು ಸರ್ಕಾರಿ ಸೌಲಭ್ಯ ಮತ್ತು ಉದ್ಯೋಗ ಪಡೆದಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಅಕ್ರಮ ಕಂಡು ಬಂದಲ್ಲಿ ಲಿಖಿತ ದೂರು ನೀಡಿದರೆ, ತಜ್ಞ ವೈದ್ಯರ ಸಮಿತಿಯಿಂದ ಮರು ತಪಾಸಣೆಗೆ ಒಳಪಡಿಸಿ ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಅಂಗವಿಕಲರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯಬಾರದು. ಅವರ ಸಮಸ್ಯೆಗಳನ್ನು ಆಲಿಸಿ, ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ತಕ್ಷಣವೇ ಸೌಲಭ್ಯ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಇದರಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಗ್ರಾಮ ಪಂಚಾಯಿತಿಗಳು ಸೇರಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಮೀಸಲಿರುವ ಶೇ 5ರಷ್ಟು ಅನುದಾನ ಮತ್ತು ಯೋಜನೆಗಳ ವಿವರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಮೀಸಲಿರುವ ಅನುದಾನದ ಬಳಕೆ ಮತ್ತು ಸೌಲಭ್ಯಗಳ ವಿತರಣೆಯಲ್ಲಿ ಆಗುತ್ತಿರುವ ಲೋಪದೋಷ ಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಅಂಗವಿಕಲರ ಅಭಿವೃದ್ಧಿಗಾಗಿ ಸರ್ಕಾರ ನೀಡುವ ಅನುದಾನವು ಸಮರ್ಪಕವಾಗಿ ಅವರ ಕೈ ಸೇರಬೇಕು. ಯಾವುದೇ ಪಂಚಾಯಿತಿಗಳು ಮಾಹಿತಿ ನೀಡಲು ನಿರಾಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ತಿಳಿಸಿದರು.</p>.<p>‘ಕೆಎಸ್ಆರ್ಟಿಸಿ ಬಸ್ಪಾಸ್ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ₹ 50 ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಲವೆಡೆ ₹ 100 ಶುಲ್ಕ ಪಡೆಯುತ್ತಿದ್ದಾರೆ’ ಎಂದು ಅಂಗವಿಕಲರು ದೂರಿದರು.</p>.<p>‘ಹೆಚ್ಚು ಶುಲ್ಕ ಪಡೆಯುವ ಗ್ರಾಮ ಒನ್ ಕೇಂದ್ರಗಳ ಬಗ್ಗೆ ದೂರ ನೀಡಿದರೇ, ಕೂಡಲೇ ಅಂತಹ ಕೇಂದ್ರಗಳಿಗೆ ನೀಡಿರುವ ಪರವಾನಗಿ ರದ್ದುಪಡಿಸಲಾಗುತ್ತದೆ. ಪುನರ್ವಸತಿ ಕಾರ್ಯಕರ್ತರ, ಫಲಾನುಭವಿಗಳ ಮನೆಗಳಿಗೆ ತೆರಳಿ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕು. ಯಾರಾದರು ವಿನಾಕಾರಣ ಅಲೆದಾಡಿಸಿದರೇ, ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿ, ಸಂಬಂಧಪಟ್ಟ ಅಧಿಕಾರಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಅವರ ವಿರುದ್ಧವೇ ಕ್ರಮ ಜರುಗಿಸ ಲಾಗುತ್ತದೆ’ ಎಂದು ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಈವರೆಗೆ ಒಟ್ಟು 35,564 ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ವಿತರಿಸಲಾಗಿದೆ. 2,666 ಅರ್ಜಿಗಳು ವೈದ್ಯಕೀಯ ಮಂಡಳಿಯ ಮುಂದೆ ಪರಿಶೀಲನೆಗಾಗಿ ಬಾಕಿ ಇವೆ. ಫಲಾನುಭವಿಗಳಿಗೆ ಕಾರ್ಡ್ ಹಸ್ತಾಂತರಿಸುವ ಮೊದಲೇ ಅವರ ಮಾಹಿತಿಯನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ’ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-101173409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>