<p><strong>ಹಿರಿಯೂರು:</strong> ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್ 5 ರಂದು ಸಾವಯವ ಕೃಷಿ ಕುರಿತು ಜಿಲ್ಲೆಯ ಆಸಕ್ತ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಸಹಾಯಕ ನಿರ್ದೇಶಕ ಆರ್. ರಜನೀಕಾಂತ ತಿಳಿಸಿದ್ದಾರೆ.</p>.<p>ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ಪದ್ಧತಿಯನ್ನು ಅನುಸರಿಸುವ ವಿಧಾನಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆ ಕುರಿತು ಬ್ಯಾಡರಹಳ್ಳಿಯ ಪ್ರಗತಿಪರ ಕೃಷಿಕ ಇಂದೂಧರ ಅವರು ರೈತರೊಂದಿಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.</p>.<p>ಹಿರಿಯೂರಿನ ಪ್ರಗತಿಪರ ಕೃಷಿಕ ಶ್ರೀನಿವಾಸ್ ಅವರು, ಜೇನು ಕೃಷಿಯ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬದ ನಿರ್ವಹಣೆ ಕುರಿತು ತಮ್ಮ ಅನುಭವಗಳನ್ನು ತಿಳಿಸಲಿದ್ದು, ಲಾಭದಾಯಕ ಹಾಗೂ ಸುಸ್ಥಿರ ಸಮಗ್ರ ಕೃಷಿ ಪದ್ಧತಿಯ ಕುರಿತು ಆರ್.ರಜನೀಕಾಂತ ರೈತರಿಗೆ ಮಾಹಿತಿ ನೀಡಲಿದ್ದಾರೆ.</p>.<p>8277931058 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-1401622531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್ 5 ರಂದು ಸಾವಯವ ಕೃಷಿ ಕುರಿತು ಜಿಲ್ಲೆಯ ಆಸಕ್ತ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಸಹಾಯಕ ನಿರ್ದೇಶಕ ಆರ್. ರಜನೀಕಾಂತ ತಿಳಿಸಿದ್ದಾರೆ.</p>.<p>ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ಪದ್ಧತಿಯನ್ನು ಅನುಸರಿಸುವ ವಿಧಾನಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆ ಕುರಿತು ಬ್ಯಾಡರಹಳ್ಳಿಯ ಪ್ರಗತಿಪರ ಕೃಷಿಕ ಇಂದೂಧರ ಅವರು ರೈತರೊಂದಿಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.</p>.<p>ಹಿರಿಯೂರಿನ ಪ್ರಗತಿಪರ ಕೃಷಿಕ ಶ್ರೀನಿವಾಸ್ ಅವರು, ಜೇನು ಕೃಷಿಯ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬದ ನಿರ್ವಹಣೆ ಕುರಿತು ತಮ್ಮ ಅನುಭವಗಳನ್ನು ತಿಳಿಸಲಿದ್ದು, ಲಾಭದಾಯಕ ಹಾಗೂ ಸುಸ್ಥಿರ ಸಮಗ್ರ ಕೃಷಿ ಪದ್ಧತಿಯ ಕುರಿತು ಆರ್.ರಜನೀಕಾಂತ ರೈತರಿಗೆ ಮಾಹಿತಿ ನೀಡಲಿದ್ದಾರೆ.</p>.<p>8277931058 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-1401622531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>