ಮಳೆ ಕೊರತೆಯಿಂದಾಗಿ ಮೇವಿನ ಲಭ್ಯತೆ ಇಲ್ಲದಿದ್ದರೂ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣೆ ನಿಧಿ (ಎನ್.ಡಿ.ಆರ್.ಎಫ್) ನಿಯಮಾವಳಿ ನೆಪವೊಡ್ಡಿ ಜಿಲ್ಲೆಯಲ್ಲಿ 90 ದಿನಗಳನ್ನು ಪೂರೈಸಿದ ಗೋಶಾಲೆಗಳನ್ನು ಮುಚ್ಚಲು ಜಿಲ್ಲಾಡಳಿತ ಆದೇಶಿಸಿತ್ತು. ಅದರಂತೆ ಮೊಳಕಾಲ್ಮುರು, ಹಿರಿಯೂರು ತಾಲ್ಲೂಕುಗಳ ಗೋಶಾಲೆಗಳನ್ನು ಮುಚ್ಚಲಾಗಿತ್ತು. ಜಾನುವಾರು ಬೀದಿಗೆ ಬಂದ ಬಗ್ಗೆ ಜೂನ್ 18ರಂದು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟಗೊಂಡಿತ್ತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಗೋಶಾಲೆಗಳನ್ನು ಮುಂದುವರಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಬುಧವಾರದಿಂದ ಗೋಶಾಲೆ ಪುನರಾರಂಭ ಮಾಡಲಾಗಿದೆ.