<p><strong>ಚಿತ್ರದುರ್ಗ</strong>: ‘ಜಿಲ್ಲಾಡಳಿತ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ವತಿಯಿಂದ ಜ.29 ಮತ್ತು 30 ರಂದು ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿವೆ. ಜತೆಗೆ ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ ಕಾರ್ಯಕ್ರಮ ಈ ಬಾರಿಯ ವಿಶೇಷ’ ಎಂದು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.</p>.<p>‘ಜಿಲ್ಲೆಯ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ಆನ್ಲೈನ್ ಮೂಲಕವೇ ನೋಂದಣಿಗೆ ಅವಕಾಶ ನೀಡಲಾಗಿತ್ತು. ಈಗಾಗಲೇ ಸುಮಾರು 2045 ನೌಕರರು ನೋಂದಣಿ ಮಾಡಿಕೊಂಡಿದ್ದಾರೆ. ನೇರ ನೋಂದಣಿಗೆ ಅವಕಾಶ ಇಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>‘ನೌಕರರಿಗೆ ವಿಶೇಷ ಟೀ ಶರ್ಟ್ ಮತ್ತು ಕ್ಯಾಪ್ ವಿತರಿಸಲಾಗುತ್ತದೆ. ನೌಕರರು ಕಡ್ಡಾಯವಾಗಿ ತಮ್ಮ ಇಲಾಖೆಯ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಎರಡು ದಿನ ವಿಶೇಷ ರಜೆ ಸೌಲಭ್ಯ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜ. 29ರಂದು ಸಂಜೆ 6ಕ್ಕೆ ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ ಎನ್ನುವ ವಿನೂತನ ಮನೋರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಾಯಕ ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರನಟ ಲವ್ಲಿಸ್ಟಾರ್ ಪ್ರೇಮ್ ವಿಶೇಷ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಎ.ಮಲ್ಲಿಕಾರ್ಜುನ, ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಬಿ.ಪೂಜಾರ್, ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಆರ್.ರಮೇಶ್, ರಾಜ್ಯ ಪರಿಷತ್ ಸದಸ್ಯೆ ಬಿ.ಟಿ.ಲೋಲಾಕ್ಷಮ್ಮ ಇದ್ದರು.</p>.<div><blockquote>ಕಾರ್ಯಕ್ರಮಕ್ಕೆ ಆಗಮಿಸುವ ಸರ್ಕಾರಿ ನೌಕರರು ಕುಟುಂಬದವರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಜೋಳ ಸಜ್ಜೆ ರೊಟ್ಟಿ ಮತ್ತು ಎಣ್ಣೆಗಾಯಿ ಪಲ್ಯದಂತಹ ಗ್ರಾಮೀಣ ಶೈಲಿಯ ಊಟ ಈ ಬಾರಿಯ ವಿಶೇಷ. </blockquote><span class="attribution">– ಮಾಲತೇಶ್ ಮುದ್ದಜ್ಜಿ, ಅಧ್ಯಕ್ಷ ನೌಕರರ ಸಂಘದ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಜಿಲ್ಲಾಡಳಿತ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ವತಿಯಿಂದ ಜ.29 ಮತ್ತು 30 ರಂದು ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿವೆ. ಜತೆಗೆ ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ ಕಾರ್ಯಕ್ರಮ ಈ ಬಾರಿಯ ವಿಶೇಷ’ ಎಂದು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.</p>.<p>‘ಜಿಲ್ಲೆಯ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ಆನ್ಲೈನ್ ಮೂಲಕವೇ ನೋಂದಣಿಗೆ ಅವಕಾಶ ನೀಡಲಾಗಿತ್ತು. ಈಗಾಗಲೇ ಸುಮಾರು 2045 ನೌಕರರು ನೋಂದಣಿ ಮಾಡಿಕೊಂಡಿದ್ದಾರೆ. ನೇರ ನೋಂದಣಿಗೆ ಅವಕಾಶ ಇಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>‘ನೌಕರರಿಗೆ ವಿಶೇಷ ಟೀ ಶರ್ಟ್ ಮತ್ತು ಕ್ಯಾಪ್ ವಿತರಿಸಲಾಗುತ್ತದೆ. ನೌಕರರು ಕಡ್ಡಾಯವಾಗಿ ತಮ್ಮ ಇಲಾಖೆಯ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಎರಡು ದಿನ ವಿಶೇಷ ರಜೆ ಸೌಲಭ್ಯ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜ. 29ರಂದು ಸಂಜೆ 6ಕ್ಕೆ ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ ಎನ್ನುವ ವಿನೂತನ ಮನೋರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಾಯಕ ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರನಟ ಲವ್ಲಿಸ್ಟಾರ್ ಪ್ರೇಮ್ ವಿಶೇಷ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಎ.ಮಲ್ಲಿಕಾರ್ಜುನ, ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಬಿ.ಪೂಜಾರ್, ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಆರ್.ರಮೇಶ್, ರಾಜ್ಯ ಪರಿಷತ್ ಸದಸ್ಯೆ ಬಿ.ಟಿ.ಲೋಲಾಕ್ಷಮ್ಮ ಇದ್ದರು.</p>.<div><blockquote>ಕಾರ್ಯಕ್ರಮಕ್ಕೆ ಆಗಮಿಸುವ ಸರ್ಕಾರಿ ನೌಕರರು ಕುಟುಂಬದವರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಜೋಳ ಸಜ್ಜೆ ರೊಟ್ಟಿ ಮತ್ತು ಎಣ್ಣೆಗಾಯಿ ಪಲ್ಯದಂತಹ ಗ್ರಾಮೀಣ ಶೈಲಿಯ ಊಟ ಈ ಬಾರಿಯ ವಿಶೇಷ. </blockquote><span class="attribution">– ಮಾಲತೇಶ್ ಮುದ್ದಜ್ಜಿ, ಅಧ್ಯಕ್ಷ ನೌಕರರ ಸಂಘದ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>