<p><strong>ಚಿತ್ರದುರ್ಗ</strong>: ‘ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡಕ್ಕೆ ವಿಶ್ವಾಸ ದ್ರೋಹ ಬಗೆದಿದೆ. ಸಂವಿಧಾನದ ಬಗ್ಗೆ ಗೌರವ ಇದ್ದರೆ ದಲಿತ ಶಾಸಕರು ಕೂಡಲೇ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಇಲ್ಲದಿದ್ದರೆ ಸಮಾಜ ನಿಮ್ಮನ್ನು ಮನೆಯಲ್ಲಿ ಕೂರಿಸುತ್ತದೆ’ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು.</p>.<p>ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಅನ್ಯಾಯ ವಿರೋಧಿಸಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಜನಾಂದೋಲನದ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಶೋಷಿತರು, ನಿರ್ಲಕ್ಷ್ಯಕ್ಕೆ ಒಳಗಾದವರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಆದರೆ, ಕಾಂಗ್ರೆಸ್ ಕುಮ್ಮಕ್ಕಿನಿಂದ ಶೇ 56ರಷ್ಟಿದ್ದ ಮೀಸಲಾತಿ ಪ್ರಮಾಣಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಬಂದಿದೆ. ಇದಕ್ಕೆ ಮೇಲ್ಮನವಿ ಸಲ್ಲಿಸಿಲ್ಲ’ ಎಂದು ದೂರಿದರು.</p>.<p>‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂದು ಪೂನಾ ಒಪ್ಪಂದದಲ್ಲಿ ಅಂಬೇಡ್ಕರ್ ಹೇಳಿದ್ದಾರೆ. ಆದರೆ ಮಂತ್ರ ಪಠಣದಂತೆ ಸದಾ ಸಂವಿಧಾನ ಹೇಳುವ ಸಚಿವ ಮಹಾದೇವಪ್ಪ ದ್ರೋಹ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ದಲಿತರ ಉದ್ಧಾರ ಬೇಕಾಗಿಲ್ಲ. ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಕೊಡುವ ಭರವಸೆ ನೀಡಿ ಈವರೆಗೆ ಈಡೇರಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಮಾದಿಗ ಸಮುದಾಯ ಒಳಮೀಸಲಾತಿಗೆ ಹೋರಾಟ ಮಾಡಿದಾಗ ಸದಾಶಿವ ಆಯೋಗ ರಚಿಸಲಾಯಿತು. ಎಸ್ಸಿ ಪಟ್ಟಿಯಲ್ಲಿರುವ ಲಂಬಾಣಿ, ಕೊರಚ, ಕೊರಮ, ಭೋವಿ ಸೇರಿದಂತೆ 101 ಜಾತಿಗಳಲ್ಲಿ ಯಾರನ್ನೂ ಎಸ್ಸಿ ಪಟ್ಟಿಯಿಂದ ತೆಗೆಯಬಾರದು ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದೆವು. ಆದರೆ, ಕಾಂಗ್ರೆಸ್ ಅಪಪ್ರಚಾರ ಮಾಡಿ ಚುನಾವಣೆ ಗೆದ್ದಿದೆ’ ಎಂದು ದೂರಿದರು.</p>.<p>‘ಮೀಸಲಾತಿ ಕಡಿತ ಮಾಡಿದ್ದಕ್ಕೆ ನಾವು ಹೋರಾಟ ಮಾಡುತ್ತಿದ್ದೇವೆ. ಆದರೆ ಬಾಯಿ ತೆರೆದರೆ ನ್ಯಾಯಾಲಯದ ಬಗ್ಗೆ ಮಾತನಾಡುತ್ತಾರೆ. ನ್ಯಾಯಾಲಯ ಪೂರ್ಣ ಪ್ರಮಾಣದಲ್ಲಿ ತಡೆಯಾಜ್ಞೆ ನೀಡಿಲ್ಲ. ಆದ್ದರಿಂದ ಬೊಮ್ಮಾಯಿ ಸರ್ಕಾರ ಅನುಷ್ಠಾನ ಮಾಡಿದ್ದ ಮೀಸಲಾತಿ ಹೆಚ್ಚಳವನ್ನು ಜಾರಿ ಮಾಡಬೇಕು. ಇಲ್ಲವಾದರೆ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮೀಸಲಾತಿಗಾಗಿ ಮೂರು ದಶಕಗಳ ಹೋರಾಟ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿತ್ತು.ಆದರೆ, ಇಂದು ಕಾಂಗ್ರೆಸ್ ಸರ್ಕಾರ ನಮ್ಮ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ದಲಿತರು, ಹಿಂದುಳಿದವರ ಭಾವನೆಗಳಿಗೆ ಘಾಸಿ ಮಾಡುವ ಕೆಲಸ ಆಗುತ್ತಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>‘ದಲಿತರ ಕುರ್ಚಿ ಮೇಲೆ ಕಾಲಿಟ್ಟು ಸರ್ಕಾರ ದೌರ್ಜನ್ಯ ಮಾಡುತ್ತಿದೆ. ದಲಿತರು ಕಾಂಗ್ರೆಸ್ಸಿನ ಗುಲಾಮರಲ್ಲ. ಪರಿಶಿಷ್ಟರ ಮೀಸಲಾತಿ ಹೆಚ್ಚು ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಇದು ಅಂಬೇಡ್ಕರ್ ಕೊಟ್ಟ ಕೊಡುಗೆ. ಕಾಂಗ್ರೆಸ್ ಮಾತಿನಲ್ಲಿ ಮಾತ್ರ ದಲಿತರ ಮೇಲೆ ಕಾಳಜಿ ತೋರಿಸುತ್ತದೆ. ಇದು ನೆಹರು ಕಾಲದಿಂದಲೂ ನಡೆಯುತ್ತಾ ಬಂದಿದೆ’ ಎಂದು ಆರೋಪಿಸಿದರು.</p>.<p>‘ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷೆ ಅಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂಬ ಅಂಶ ಸಂವಿಧಾನದಲ್ಲಿದೆ. ಜಾರ್ಖಂಡ್, ಛತ್ತಿಸ್ಘಡದಲ್ಲಿ ಪ್ರಮಾಣ ಹೆಚ್ಚಿದೆ. ಆದರೆ, ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಇಲ್ಲಸಲ್ಲದ ಸುಳ್ಳು ಹೇಳುತ್ತಿದೆ’ ಎಂದು ಮಾಜಿ ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>‘ಒಳಮೀಸಲಾತಿ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮೀಸಲಾತಿ ಶೇ 50 ಮೀರುವಂತಿಲ್ಲ ಎಂದು ಸದನದ ದಿಕ್ಕು ತಪ್ಪಿಸಿತು. ದೇಶದ ಯಾವ ರಾಜ್ಯಗಳಲ್ಲಿ ಶೇ 50ರ ಮಿತಿ ದಾಟಿಗೆ ಎನ್ನುವ ಮಾಹಿತಿ ಪಡೆಯಲು ಆಗದಿದ್ದರೆ ಕುರ್ಚಿಯಲ್ಲಿ ಯಾಕೆ ಕುಳಿತಿದ್ದೀರಿ?’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಹಕ್ಕುಗಳನ್ನು ಶಾಸನದಲ್ಲಿ, ಸರ್ಕಾರದಲ್ಲಿ ರಕ್ಷಣೆ ಮಾಡಿಕೊಳ್ಳಲು ಆಗದಿದ್ದರೆ ಜನರ ಬಳಿ ಹೋಗಿ ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಅದೇ ಕೆಲಸವನ್ನು ಈಗ ಬಿಜೆಪಿ ಮೂಲಕ ನಾವು ಕೈಗೆತ್ತಿಕೊಂಡಿದ್ದೇವೆ. ಎಸ್ಸಿ, ಎಸ್ಟಿಗಳಿಗೆ ಏನೇ ಮಾಡಿದರೂ ಕಾಂಗ್ರೆಸ್ಸಿಗೆ ಮತ ಹಾಕುತ್ತಾರೆ ಎನ್ನುವ ಹುಂಬತನವಿದೆ. ನೀವು ಮತ ಬದಲಾಯಿಸದಿದ್ದರೆ ಬದುಕು ಬದಲಾಗುವುದಿಲ್ಲ’ ಎಂದು ಮಾಜಿ ಸಚಿವ ಎನ್.ಮಹೇಶ್ ಎಚ್ಚರಿಸಿದರು.</p>.<p>ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಎಸ್ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಬಂಗಾರು ಹನುಮಂತು, ಎಸ್ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸಿಮೆಂಟ್ ಮಂಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್ ಕುಮಾರ್ ಇದ್ದರು.</p>.<div><blockquote>ಮಾಜಿ ಪ್ರಧಾನಿಗಳಾದ ನೆಹರು ಇಂದಿರಾ ಗಾಂಧಿ ರಾಜೀವ್ ಗಾಂಧಿ ಕೂಡಾ ಮೀಸಲಾತಿ ವಿರೋಧಿಸಿದ್ದರು. ಈಗ ಸಿದ್ದರಾಮಯ್ಯ ಅದೇ ಚಾಳಿ ಮುಂದುವರೆಸಿ ಶೇ 50ಕ್ಕೆ ಇಳಿಸುವ ಕೆಲಸ ಮಾಡುತ್ತಿದ್ದಾರೆ</blockquote><span class="attribution">-ಬಿ.ಶ್ರೀರಾಮುಲು, ಮಾಜಿ ಸಚಿವ</span></div>.<div><blockquote>ನಾಗಮೋಹನ್ ದಾಸ್ ಆಯೋಗದ ವರದಿ ತಿರುಚುವ ಅಧಿಕಾರವನ್ನು ಸಂಪುಟಕ್ಕೆ ಕೊಟ್ಟವರು ಯಾರು. ಸಚಿವ ಮಹದೇವಪ್ಪಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ </blockquote><span class="attribution">-ಎ.ನಾರಾಯಣಸ್ವಾಮಿ, ಮಾಜಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡಕ್ಕೆ ವಿಶ್ವಾಸ ದ್ರೋಹ ಬಗೆದಿದೆ. ಸಂವಿಧಾನದ ಬಗ್ಗೆ ಗೌರವ ಇದ್ದರೆ ದಲಿತ ಶಾಸಕರು ಕೂಡಲೇ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಇಲ್ಲದಿದ್ದರೆ ಸಮಾಜ ನಿಮ್ಮನ್ನು ಮನೆಯಲ್ಲಿ ಕೂರಿಸುತ್ತದೆ’ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು.</p>.<p>ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಅನ್ಯಾಯ ವಿರೋಧಿಸಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಜನಾಂದೋಲನದ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಶೋಷಿತರು, ನಿರ್ಲಕ್ಷ್ಯಕ್ಕೆ ಒಳಗಾದವರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಆದರೆ, ಕಾಂಗ್ರೆಸ್ ಕುಮ್ಮಕ್ಕಿನಿಂದ ಶೇ 56ರಷ್ಟಿದ್ದ ಮೀಸಲಾತಿ ಪ್ರಮಾಣಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಬಂದಿದೆ. ಇದಕ್ಕೆ ಮೇಲ್ಮನವಿ ಸಲ್ಲಿಸಿಲ್ಲ’ ಎಂದು ದೂರಿದರು.</p>.<p>‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂದು ಪೂನಾ ಒಪ್ಪಂದದಲ್ಲಿ ಅಂಬೇಡ್ಕರ್ ಹೇಳಿದ್ದಾರೆ. ಆದರೆ ಮಂತ್ರ ಪಠಣದಂತೆ ಸದಾ ಸಂವಿಧಾನ ಹೇಳುವ ಸಚಿವ ಮಹಾದೇವಪ್ಪ ದ್ರೋಹ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ದಲಿತರ ಉದ್ಧಾರ ಬೇಕಾಗಿಲ್ಲ. ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಕೊಡುವ ಭರವಸೆ ನೀಡಿ ಈವರೆಗೆ ಈಡೇರಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಮಾದಿಗ ಸಮುದಾಯ ಒಳಮೀಸಲಾತಿಗೆ ಹೋರಾಟ ಮಾಡಿದಾಗ ಸದಾಶಿವ ಆಯೋಗ ರಚಿಸಲಾಯಿತು. ಎಸ್ಸಿ ಪಟ್ಟಿಯಲ್ಲಿರುವ ಲಂಬಾಣಿ, ಕೊರಚ, ಕೊರಮ, ಭೋವಿ ಸೇರಿದಂತೆ 101 ಜಾತಿಗಳಲ್ಲಿ ಯಾರನ್ನೂ ಎಸ್ಸಿ ಪಟ್ಟಿಯಿಂದ ತೆಗೆಯಬಾರದು ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದೆವು. ಆದರೆ, ಕಾಂಗ್ರೆಸ್ ಅಪಪ್ರಚಾರ ಮಾಡಿ ಚುನಾವಣೆ ಗೆದ್ದಿದೆ’ ಎಂದು ದೂರಿದರು.</p>.<p>‘ಮೀಸಲಾತಿ ಕಡಿತ ಮಾಡಿದ್ದಕ್ಕೆ ನಾವು ಹೋರಾಟ ಮಾಡುತ್ತಿದ್ದೇವೆ. ಆದರೆ ಬಾಯಿ ತೆರೆದರೆ ನ್ಯಾಯಾಲಯದ ಬಗ್ಗೆ ಮಾತನಾಡುತ್ತಾರೆ. ನ್ಯಾಯಾಲಯ ಪೂರ್ಣ ಪ್ರಮಾಣದಲ್ಲಿ ತಡೆಯಾಜ್ಞೆ ನೀಡಿಲ್ಲ. ಆದ್ದರಿಂದ ಬೊಮ್ಮಾಯಿ ಸರ್ಕಾರ ಅನುಷ್ಠಾನ ಮಾಡಿದ್ದ ಮೀಸಲಾತಿ ಹೆಚ್ಚಳವನ್ನು ಜಾರಿ ಮಾಡಬೇಕು. ಇಲ್ಲವಾದರೆ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮೀಸಲಾತಿಗಾಗಿ ಮೂರು ದಶಕಗಳ ಹೋರಾಟ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿತ್ತು.ಆದರೆ, ಇಂದು ಕಾಂಗ್ರೆಸ್ ಸರ್ಕಾರ ನಮ್ಮ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ದಲಿತರು, ಹಿಂದುಳಿದವರ ಭಾವನೆಗಳಿಗೆ ಘಾಸಿ ಮಾಡುವ ಕೆಲಸ ಆಗುತ್ತಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>‘ದಲಿತರ ಕುರ್ಚಿ ಮೇಲೆ ಕಾಲಿಟ್ಟು ಸರ್ಕಾರ ದೌರ್ಜನ್ಯ ಮಾಡುತ್ತಿದೆ. ದಲಿತರು ಕಾಂಗ್ರೆಸ್ಸಿನ ಗುಲಾಮರಲ್ಲ. ಪರಿಶಿಷ್ಟರ ಮೀಸಲಾತಿ ಹೆಚ್ಚು ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಇದು ಅಂಬೇಡ್ಕರ್ ಕೊಟ್ಟ ಕೊಡುಗೆ. ಕಾಂಗ್ರೆಸ್ ಮಾತಿನಲ್ಲಿ ಮಾತ್ರ ದಲಿತರ ಮೇಲೆ ಕಾಳಜಿ ತೋರಿಸುತ್ತದೆ. ಇದು ನೆಹರು ಕಾಲದಿಂದಲೂ ನಡೆಯುತ್ತಾ ಬಂದಿದೆ’ ಎಂದು ಆರೋಪಿಸಿದರು.</p>.<p>‘ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷೆ ಅಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂಬ ಅಂಶ ಸಂವಿಧಾನದಲ್ಲಿದೆ. ಜಾರ್ಖಂಡ್, ಛತ್ತಿಸ್ಘಡದಲ್ಲಿ ಪ್ರಮಾಣ ಹೆಚ್ಚಿದೆ. ಆದರೆ, ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಇಲ್ಲಸಲ್ಲದ ಸುಳ್ಳು ಹೇಳುತ್ತಿದೆ’ ಎಂದು ಮಾಜಿ ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>‘ಒಳಮೀಸಲಾತಿ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮೀಸಲಾತಿ ಶೇ 50 ಮೀರುವಂತಿಲ್ಲ ಎಂದು ಸದನದ ದಿಕ್ಕು ತಪ್ಪಿಸಿತು. ದೇಶದ ಯಾವ ರಾಜ್ಯಗಳಲ್ಲಿ ಶೇ 50ರ ಮಿತಿ ದಾಟಿಗೆ ಎನ್ನುವ ಮಾಹಿತಿ ಪಡೆಯಲು ಆಗದಿದ್ದರೆ ಕುರ್ಚಿಯಲ್ಲಿ ಯಾಕೆ ಕುಳಿತಿದ್ದೀರಿ?’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಹಕ್ಕುಗಳನ್ನು ಶಾಸನದಲ್ಲಿ, ಸರ್ಕಾರದಲ್ಲಿ ರಕ್ಷಣೆ ಮಾಡಿಕೊಳ್ಳಲು ಆಗದಿದ್ದರೆ ಜನರ ಬಳಿ ಹೋಗಿ ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಅದೇ ಕೆಲಸವನ್ನು ಈಗ ಬಿಜೆಪಿ ಮೂಲಕ ನಾವು ಕೈಗೆತ್ತಿಕೊಂಡಿದ್ದೇವೆ. ಎಸ್ಸಿ, ಎಸ್ಟಿಗಳಿಗೆ ಏನೇ ಮಾಡಿದರೂ ಕಾಂಗ್ರೆಸ್ಸಿಗೆ ಮತ ಹಾಕುತ್ತಾರೆ ಎನ್ನುವ ಹುಂಬತನವಿದೆ. ನೀವು ಮತ ಬದಲಾಯಿಸದಿದ್ದರೆ ಬದುಕು ಬದಲಾಗುವುದಿಲ್ಲ’ ಎಂದು ಮಾಜಿ ಸಚಿವ ಎನ್.ಮಹೇಶ್ ಎಚ್ಚರಿಸಿದರು.</p>.<p>ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಎಸ್ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಬಂಗಾರು ಹನುಮಂತು, ಎಸ್ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸಿಮೆಂಟ್ ಮಂಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್ ಕುಮಾರ್ ಇದ್ದರು.</p>.<div><blockquote>ಮಾಜಿ ಪ್ರಧಾನಿಗಳಾದ ನೆಹರು ಇಂದಿರಾ ಗಾಂಧಿ ರಾಜೀವ್ ಗಾಂಧಿ ಕೂಡಾ ಮೀಸಲಾತಿ ವಿರೋಧಿಸಿದ್ದರು. ಈಗ ಸಿದ್ದರಾಮಯ್ಯ ಅದೇ ಚಾಳಿ ಮುಂದುವರೆಸಿ ಶೇ 50ಕ್ಕೆ ಇಳಿಸುವ ಕೆಲಸ ಮಾಡುತ್ತಿದ್ದಾರೆ</blockquote><span class="attribution">-ಬಿ.ಶ್ರೀರಾಮುಲು, ಮಾಜಿ ಸಚಿವ</span></div>.<div><blockquote>ನಾಗಮೋಹನ್ ದಾಸ್ ಆಯೋಗದ ವರದಿ ತಿರುಚುವ ಅಧಿಕಾರವನ್ನು ಸಂಪುಟಕ್ಕೆ ಕೊಟ್ಟವರು ಯಾರು. ಸಚಿವ ಮಹದೇವಪ್ಪಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ </blockquote><span class="attribution">-ಎ.ನಾರಾಯಣಸ್ವಾಮಿ, ಮಾಜಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>