<p><strong>ಚಿತ್ರದುರ್ಗ</strong>: ಜಿಲ್ಲೆಯ ವಿವಿಧೆಡೆ ಬುಧವಾರ ನಸುಕಿನಲ್ಲಿ ಗುಡುಗು, ಮಿಂಚು ಸಮೇತ ಭಾರಿ ಮಳೆ ಸುರಿದಿದೆ.</p><p>ನಸುಕಿನ 3 ಗಂಟೆಗೆ ಆರಂಭವಾದ ಮಳೆ 5 ಗಂಟೆಯವರೆಗೂ ಸುರಿಯಿತು. ನಗರದದಲ್ಲೂ ಧಾರಾಕಾರ ಮಳೆಯಾಗಿದ್ದು ರಸ್ತೆಗಳಲ್ಲಿ ನೀರು ಹರಿಯಿತು.</p><p>ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದರೂ ಜಿಲ್ಲೆಯಲ್ಲಿ ಬರದ ಛಾಯೆ ಇತ್ತು. ಶೇಂಗಾ, ಮೆಕ್ಕೆಜೋಳ ಬಿತ್ತನೆ ತಡವಾಗುತ್ತಿದ್ದ ಕಾರಣ ರೈತರು ಆತಂಕಗೊಂಡಿದ್ದರು. ಈಗ ಸೂಕ್ತ ಸಮಯಕ್ಕೆ ಮಳೆಯಾಗಿದ್ದು ಕೃಷಿ ಚಟುವಟಿಕೆ ಗರಿಗೆದರಿವೆ.</p><p>ಆಂಧ್ರಪ್ರದೇಶದ ಜೊತೆ ಗಡಿ ಹಂಚಿಕೊಂಡಿರುವ ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯಲ್ಲಿ ಬರದ ಛಾಯೆ ಇತ್ತು. ಸದ್ಯ ಮೊಳಕಾಲ್ಮುರು ವ್ಯಾಪ್ತಿಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲೂ ಭಾರಿ ಮಳೆಯಾಗಿದೆ</p><p>'ಬಿತ್ತನೆ ಹಿಂದೆ ಬೀಳುತ್ತದೆ ಎಂಬ ಭಯದಿಂದ ಮೂರು ದಿನಗಳ ಹಿಂದಷ್ಟೇ ಒಣ ಭೂಮಿಗೆ ಶೇಂಗಾ ಬಿತ್ತನೆ ಮಾಡಿದ್ದೆವು. ಈಗ ಮಳೆಯಾಗಿದ್ದು ಮೊಳಕೆಯೊಡೆಯಲು ಅನುಕೂಲವಾಗಲಿದೆ' ಎಂದು ಚಳ್ಳಕೆರೆಯ ರೈತರೊಬ್ಬರು ಸಂತಸ ವ್ಯಕ್ತಪಡಿಸಿದರು.</p><p><strong>ಜಮೀನಿಗೆ ನುಗ್ಗಿದ ನೀರು</strong>; ಹೊಳಲ್ಕೆರೆ ತಾಲ್ಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ಜಮೀನಿಗೆ ಮಳೆ ನೀರು ನುಗ್ಗಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಚಿಕ್ಕಜಾಜೂರು, ಬಿ.ದುರ್ಗ ಸಮೀಪದ ಜಮೀನಿಗೆ ಹಳ್ಳದ ನೀರು ನುಗ್ಗಿ ಬೆಳೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಜಿಲ್ಲೆಯ ವಿವಿಧೆಡೆ ಬುಧವಾರ ನಸುಕಿನಲ್ಲಿ ಗುಡುಗು, ಮಿಂಚು ಸಮೇತ ಭಾರಿ ಮಳೆ ಸುರಿದಿದೆ.</p><p>ನಸುಕಿನ 3 ಗಂಟೆಗೆ ಆರಂಭವಾದ ಮಳೆ 5 ಗಂಟೆಯವರೆಗೂ ಸುರಿಯಿತು. ನಗರದದಲ್ಲೂ ಧಾರಾಕಾರ ಮಳೆಯಾಗಿದ್ದು ರಸ್ತೆಗಳಲ್ಲಿ ನೀರು ಹರಿಯಿತು.</p><p>ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದರೂ ಜಿಲ್ಲೆಯಲ್ಲಿ ಬರದ ಛಾಯೆ ಇತ್ತು. ಶೇಂಗಾ, ಮೆಕ್ಕೆಜೋಳ ಬಿತ್ತನೆ ತಡವಾಗುತ್ತಿದ್ದ ಕಾರಣ ರೈತರು ಆತಂಕಗೊಂಡಿದ್ದರು. ಈಗ ಸೂಕ್ತ ಸಮಯಕ್ಕೆ ಮಳೆಯಾಗಿದ್ದು ಕೃಷಿ ಚಟುವಟಿಕೆ ಗರಿಗೆದರಿವೆ.</p><p>ಆಂಧ್ರಪ್ರದೇಶದ ಜೊತೆ ಗಡಿ ಹಂಚಿಕೊಂಡಿರುವ ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯಲ್ಲಿ ಬರದ ಛಾಯೆ ಇತ್ತು. ಸದ್ಯ ಮೊಳಕಾಲ್ಮುರು ವ್ಯಾಪ್ತಿಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲೂ ಭಾರಿ ಮಳೆಯಾಗಿದೆ</p><p>'ಬಿತ್ತನೆ ಹಿಂದೆ ಬೀಳುತ್ತದೆ ಎಂಬ ಭಯದಿಂದ ಮೂರು ದಿನಗಳ ಹಿಂದಷ್ಟೇ ಒಣ ಭೂಮಿಗೆ ಶೇಂಗಾ ಬಿತ್ತನೆ ಮಾಡಿದ್ದೆವು. ಈಗ ಮಳೆಯಾಗಿದ್ದು ಮೊಳಕೆಯೊಡೆಯಲು ಅನುಕೂಲವಾಗಲಿದೆ' ಎಂದು ಚಳ್ಳಕೆರೆಯ ರೈತರೊಬ್ಬರು ಸಂತಸ ವ್ಯಕ್ತಪಡಿಸಿದರು.</p><p><strong>ಜಮೀನಿಗೆ ನುಗ್ಗಿದ ನೀರು</strong>; ಹೊಳಲ್ಕೆರೆ ತಾಲ್ಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ಜಮೀನಿಗೆ ಮಳೆ ನೀರು ನುಗ್ಗಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಚಿಕ್ಕಜಾಜೂರು, ಬಿ.ದುರ್ಗ ಸಮೀಪದ ಜಮೀನಿಗೆ ಹಳ್ಳದ ನೀರು ನುಗ್ಗಿ ಬೆಳೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>