<p><strong>ಹಿರಿಯೂರು</strong>: ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಜಮೀನಿನಲ್ಲಿ ಮನೆ ನಿರ್ಮಿಸಲು ತೆಗೆದಿದ್ದ ಅಡಿಪಾಯಕ್ಕೆ ನೀರು ಹಾಯಿಸುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಚಿತ್ರದುರ್ಗದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪನ್ಯಾಸಕರೊಬ್ಬರು ಸಾವಿಗೀಡಾಗಿದ್ದಾರೆ.</p>.<p>ಕೆ. ರಾಮಚಂದ್ರಪ್ಪ (52) ಮೃತಪಟ್ಟವರು. ತಾಲ್ಲೂಕಿನ ಬೀರೇನಹಳ್ಳಿ ಮಜರೆ ಶಿವಪುರ ಗ್ರಾಮದವರಾದ ಇವರು ಭಾನುವಾರ ಸಂಜೆ ಅಡಿಪಾಯಕ್ಕೆ ನೀರು ಹಾಯಿಸಲು ಮೋಟರ್ ಚಾಲೂ ಮಾಡಿದಾಗ ಅಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-44-1774382032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಜಮೀನಿನಲ್ಲಿ ಮನೆ ನಿರ್ಮಿಸಲು ತೆಗೆದಿದ್ದ ಅಡಿಪಾಯಕ್ಕೆ ನೀರು ಹಾಯಿಸುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಚಿತ್ರದುರ್ಗದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪನ್ಯಾಸಕರೊಬ್ಬರು ಸಾವಿಗೀಡಾಗಿದ್ದಾರೆ.</p>.<p>ಕೆ. ರಾಮಚಂದ್ರಪ್ಪ (52) ಮೃತಪಟ್ಟವರು. ತಾಲ್ಲೂಕಿನ ಬೀರೇನಹಳ್ಳಿ ಮಜರೆ ಶಿವಪುರ ಗ್ರಾಮದವರಾದ ಇವರು ಭಾನುವಾರ ಸಂಜೆ ಅಡಿಪಾಯಕ್ಕೆ ನೀರು ಹಾಯಿಸಲು ಮೋಟರ್ ಚಾಲೂ ಮಾಡಿದಾಗ ಅಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-44-1774382032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>