<p>ಹಿರಿಯೂರು: ತಾಲ್ಲೂಕಿನ ಕಲ್ಲುವಳ್ಳಿ ಭಾಗದ ಹತ್ತಾರು ಹಳ್ಳಿಗಳ ಜನರ ಬಹುವರ್ಷಗಳ ಬೇಡಿಕೆಯನ್ನು ಗುರುವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಈಡೇರಿಸಿದ್ದಾರೆ.</p>.<p>ತಾಲ್ಲೂಕಿನ ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವ ನಾಗತಿಹಳ್ಳಿ, ಚಿಗಳಿಕಟ್ಟೆ, ಯಲ್ಲದಕೆರೆ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ ಬಸ್ ಓಡಾಟದಿಂದ ಅನುಕೂಲವಾಗಲಿದೆ. ಹಿಂದೆಯೂ ಈ ಮಾರ್ಗದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸಲಾಗುತ್ತಿತ್ತು. ಏನಾಯಿತೋ ತಿಳಿಯದು ಇದ್ದಕ್ಕಿದ್ದಂತೆ ಓಡಾಟ ಸ್ಥಗಿತಗೊಂಡಿತ್ತು. ಈ ಬಾರಿ ಗ್ರಾಮೀಣ ಭಾಗದ ಜನರಿಗೆ ತೊಂದರೆ ಆಗದ ರೀತಿಯಲ್ಲಿ ನಿರಂತರವಾಗಿ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಸಚಿವ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಈ ಮಾರ್ಗದಲ್ಲಿ ಬಸ್ ಓಡಿಸುವಂತೆ ಸಾರಿಗೆ ನಿಗಮದ ಚಿತ್ರದುರ್ಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಸೂಚಿಸಿದ್ದರು. ಸಚಿವರ ಸೂಚನೆಯಂತೆ ನಿತ್ಯ ಬೆಳಿಗ್ಗೆ 8 ಗಂಟೆಗೆ ಹಿರಿಯೂರು ಬಸ್ ನಿಲ್ದಾಣದಿಂದ ಹೊರಟು ಪಟ್ರೆಹಳ್ಳಿ, ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವನಾಗತಿಹಳ್ಳಿ, ಚಿಗಳಿಕಟ್ಟೆ ಮಾರ್ಗವಾಗಿ ಯಲ್ಲದಕೆರೆಗೆ ಹೋಗಿ ಮರಳಿ ಅದೇ ಮಾರ್ಗದಲ್ಲಿ ಹಿಂದಿರುಗುತ್ತದೆ. ಗ್ರಾಮಕ್ಕೆ ಬಸ್ಸು ಬಂದಿದ್ದನ್ನು ಕಂಡ ವೀರವ್ವನಾಗತಿಹಳ್ಳಿ ಗ್ರಾಮಸ್ಥರು ಬಸ್ಸಿಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-1950580917</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ತಾಲ್ಲೂಕಿನ ಕಲ್ಲುವಳ್ಳಿ ಭಾಗದ ಹತ್ತಾರು ಹಳ್ಳಿಗಳ ಜನರ ಬಹುವರ್ಷಗಳ ಬೇಡಿಕೆಯನ್ನು ಗುರುವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಈಡೇರಿಸಿದ್ದಾರೆ.</p>.<p>ತಾಲ್ಲೂಕಿನ ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವ ನಾಗತಿಹಳ್ಳಿ, ಚಿಗಳಿಕಟ್ಟೆ, ಯಲ್ಲದಕೆರೆ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ ಬಸ್ ಓಡಾಟದಿಂದ ಅನುಕೂಲವಾಗಲಿದೆ. ಹಿಂದೆಯೂ ಈ ಮಾರ್ಗದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸಲಾಗುತ್ತಿತ್ತು. ಏನಾಯಿತೋ ತಿಳಿಯದು ಇದ್ದಕ್ಕಿದ್ದಂತೆ ಓಡಾಟ ಸ್ಥಗಿತಗೊಂಡಿತ್ತು. ಈ ಬಾರಿ ಗ್ರಾಮೀಣ ಭಾಗದ ಜನರಿಗೆ ತೊಂದರೆ ಆಗದ ರೀತಿಯಲ್ಲಿ ನಿರಂತರವಾಗಿ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಸಚಿವ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಈ ಮಾರ್ಗದಲ್ಲಿ ಬಸ್ ಓಡಿಸುವಂತೆ ಸಾರಿಗೆ ನಿಗಮದ ಚಿತ್ರದುರ್ಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಸೂಚಿಸಿದ್ದರು. ಸಚಿವರ ಸೂಚನೆಯಂತೆ ನಿತ್ಯ ಬೆಳಿಗ್ಗೆ 8 ಗಂಟೆಗೆ ಹಿರಿಯೂರು ಬಸ್ ನಿಲ್ದಾಣದಿಂದ ಹೊರಟು ಪಟ್ರೆಹಳ್ಳಿ, ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವನಾಗತಿಹಳ್ಳಿ, ಚಿಗಳಿಕಟ್ಟೆ ಮಾರ್ಗವಾಗಿ ಯಲ್ಲದಕೆರೆಗೆ ಹೋಗಿ ಮರಳಿ ಅದೇ ಮಾರ್ಗದಲ್ಲಿ ಹಿಂದಿರುಗುತ್ತದೆ. ಗ್ರಾಮಕ್ಕೆ ಬಸ್ಸು ಬಂದಿದ್ದನ್ನು ಕಂಡ ವೀರವ್ವನಾಗತಿಹಳ್ಳಿ ಗ್ರಾಮಸ್ಥರು ಬಸ್ಸಿಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-1950580917</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>