<p><strong>ಚಿತ್ರದುರ್ಗ</strong>: ನಗರದ ತೋಟಗಾರಿಕೆ ಇಲಾಖೆ ಆವರಣದ ಸಸ್ಯಕ್ಷೇತ್ರದಲ್ಲಿರುವ ಸಾವಿರಾರು ಮರ, ಗಿಡ, ಸಸ್ಯ ಸಂಕುಲವನ್ನು ನಾಶಗೊಳಿಸಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡುವುದು ಬೇಡ. ಭವನ ನಿರ್ಮಾಣಕ್ಕೆ ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಹಾಪ್ ಕಾಮ್ಸ್ ಆಡಳಿತ ಮಂಡಳಿ, ಜಿಲ್ಲಾ ತೋಟಗಾರಿಕೆ ಸಂಘದ ಸದಸ್ಯರು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಕುರಿತು ಸಂಘಟನೆಗಳ ಸದಸ್ಯರು ಬುಧವಾರ ನಗರದಲ್ಲಿ ಸಭೆ ನಡೆಸಿದರು. ನಗರಕ್ಕೆ ಹಸಿರು ಹೊದಿಕೆಯಾಗಿರುವ ಸಸ್ಯಕ್ಷೇತ್ರವನ್ನು ಉಳಿಸಿಕೊಳ್ಳಬೇಕು, ತೋಟಗಾರಿಕೆ ಇಲಾಖೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣ ಪ್ರಸ್ತಾವದ ವಿರುದ್ಧ ಹೋರಾಟ ನಡೆಸಬೇಕು ಎಂದು ತೀರ್ಮಾನ ಕೈಗೊಂಡರು. ದಾವಣೆಗೆರೆಯಲ್ಲಿ ತೋಟಗಾರಿಕೆ ಇಲಾಖೆ ಸಚಿವರನ್ನು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>ತೋಟಗಾರಿಕೆ ಇಲಾಖೆಯ ಸಸ್ಯಕ್ಷೇತ್ರ ಹಸಿರು ಕೋಟೆಯನ್ನು ನಿರ್ಮಿಸಿದೆ. ಕೋಟೆನಗರಿಗೆ ಆತ್ಮ, ಹೃದಯದಂತಿದೆ. 2,000ಕ್ಕೂ ಹೆಚ್ಚು ಮರಗಿಡ ಸಸ್ಯವನ್ನು ನಾಶಗೊಳಿಸಿ ಸಿಮೆಂಟ್ ಕಟ್ಟಡ ನಿರ್ಮಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಇದರ ವಿರುದ್ಧ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ಧ್ವನಿ ಎತ್ತಬೇಕು ಎಂದು ಮುಖಂಡರು ತಿಳಿಸಿದರು.</p>.<p>ಪರಿಸರ ಪ್ರೇಮಿಗಳು, ಸಂಘಟನೆಗಳ ವಿರೋಧದ ನಡುವೆಯೂ ಜಿಲ್ಲಾಡಳಿತ ಹೊಸ ಭವನ ಕಟ್ಟುವುದಕ್ಕೆ ಮುಂದಾದರೆ ಅದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು. ನಗರದ ಪರಿಸರಕ್ಕೆ ಜೀವ ತುಂಬಿರುವ ಸಸ್ಯಕ್ಷೇತ್ರವನ್ನು ಉಳಿಸಿಕೊಳ್ಳಲು ಅಪ್ಪಿಕೋ ಚಳವಳಿ ನಡೆಸುವುದು ಅನಿವಾರ್ಯವಾಗಿದೆ. ನಮ್ಮೊಂದಿಗೆ ಜಿಲ್ಲೆಯ ಸಂಘಟನೆಗಳು ಜೊತೆಯಾಗಬೇಕು ಎಂದು ಮನವಿ ಮಾಡಿದರು</p>.<p>ನಗರದಿಂದ ಎಂಟತ್ತು ಕಿ.ಮೀ ದೂರದಲ್ಲಿರುವ ಚಿಕ್ಕಪುರದಲ್ಲಿ ಸಸ್ಯಕ್ಷೇತ್ರ ನಿರ್ಮಿಸುವುದಾಗಿ ಜನಪ್ರತಿನಿಧಿಗಳು ತಿಳಿಸಿದ್ದಾರೆ. ನಗರದಿಂದ ದೂರವಿರುದ ಸ್ಥಳಕ್ಕೆ ತೆರಳಲು ರೈತರಿಗೆ ತೊಂದರೆಯಾಗುತ್ತದೆ. ಈಗಾಗಲೇ ಬೆಳೆಸಿರುವ ಮರಗಳನ್ನು ಕಡಿಯುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಪರಿಸರ ಸಂರಕ್ಷಣೆಗಾಗಿ ಈ ಮರ, ಗಿಡಗಳನ್ನು ಕಡಿಯಕೂಡದು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಹಾಪ್ಕಾಮ್ಸ್ನ ರಾಜ್ಯ ಪ್ರತಿನಿಧಿ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರಮೂರ್ತಿ, ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ತೋಟಗಾರಿಕೆ ಸಂಘದ ನಿರ್ದೇಶಕರಾದ ಎಸ್.ಜಿ.ಸತ್ಯನಾರಾಯಣ ನಾಯ್ಡು, ಶ್ವೇತಾ ವಿಶ್ವನಾಥ್, ಖಜಾಂಚಿ ನಾಗರಾಜ್ ಬೇದ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ನಗರದ ತೋಟಗಾರಿಕೆ ಇಲಾಖೆ ಆವರಣದ ಸಸ್ಯಕ್ಷೇತ್ರದಲ್ಲಿರುವ ಸಾವಿರಾರು ಮರ, ಗಿಡ, ಸಸ್ಯ ಸಂಕುಲವನ್ನು ನಾಶಗೊಳಿಸಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡುವುದು ಬೇಡ. ಭವನ ನಿರ್ಮಾಣಕ್ಕೆ ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಹಾಪ್ ಕಾಮ್ಸ್ ಆಡಳಿತ ಮಂಡಳಿ, ಜಿಲ್ಲಾ ತೋಟಗಾರಿಕೆ ಸಂಘದ ಸದಸ್ಯರು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಕುರಿತು ಸಂಘಟನೆಗಳ ಸದಸ್ಯರು ಬುಧವಾರ ನಗರದಲ್ಲಿ ಸಭೆ ನಡೆಸಿದರು. ನಗರಕ್ಕೆ ಹಸಿರು ಹೊದಿಕೆಯಾಗಿರುವ ಸಸ್ಯಕ್ಷೇತ್ರವನ್ನು ಉಳಿಸಿಕೊಳ್ಳಬೇಕು, ತೋಟಗಾರಿಕೆ ಇಲಾಖೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣ ಪ್ರಸ್ತಾವದ ವಿರುದ್ಧ ಹೋರಾಟ ನಡೆಸಬೇಕು ಎಂದು ತೀರ್ಮಾನ ಕೈಗೊಂಡರು. ದಾವಣೆಗೆರೆಯಲ್ಲಿ ತೋಟಗಾರಿಕೆ ಇಲಾಖೆ ಸಚಿವರನ್ನು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>ತೋಟಗಾರಿಕೆ ಇಲಾಖೆಯ ಸಸ್ಯಕ್ಷೇತ್ರ ಹಸಿರು ಕೋಟೆಯನ್ನು ನಿರ್ಮಿಸಿದೆ. ಕೋಟೆನಗರಿಗೆ ಆತ್ಮ, ಹೃದಯದಂತಿದೆ. 2,000ಕ್ಕೂ ಹೆಚ್ಚು ಮರಗಿಡ ಸಸ್ಯವನ್ನು ನಾಶಗೊಳಿಸಿ ಸಿಮೆಂಟ್ ಕಟ್ಟಡ ನಿರ್ಮಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಇದರ ವಿರುದ್ಧ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ಧ್ವನಿ ಎತ್ತಬೇಕು ಎಂದು ಮುಖಂಡರು ತಿಳಿಸಿದರು.</p>.<p>ಪರಿಸರ ಪ್ರೇಮಿಗಳು, ಸಂಘಟನೆಗಳ ವಿರೋಧದ ನಡುವೆಯೂ ಜಿಲ್ಲಾಡಳಿತ ಹೊಸ ಭವನ ಕಟ್ಟುವುದಕ್ಕೆ ಮುಂದಾದರೆ ಅದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು. ನಗರದ ಪರಿಸರಕ್ಕೆ ಜೀವ ತುಂಬಿರುವ ಸಸ್ಯಕ್ಷೇತ್ರವನ್ನು ಉಳಿಸಿಕೊಳ್ಳಲು ಅಪ್ಪಿಕೋ ಚಳವಳಿ ನಡೆಸುವುದು ಅನಿವಾರ್ಯವಾಗಿದೆ. ನಮ್ಮೊಂದಿಗೆ ಜಿಲ್ಲೆಯ ಸಂಘಟನೆಗಳು ಜೊತೆಯಾಗಬೇಕು ಎಂದು ಮನವಿ ಮಾಡಿದರು</p>.<p>ನಗರದಿಂದ ಎಂಟತ್ತು ಕಿ.ಮೀ ದೂರದಲ್ಲಿರುವ ಚಿಕ್ಕಪುರದಲ್ಲಿ ಸಸ್ಯಕ್ಷೇತ್ರ ನಿರ್ಮಿಸುವುದಾಗಿ ಜನಪ್ರತಿನಿಧಿಗಳು ತಿಳಿಸಿದ್ದಾರೆ. ನಗರದಿಂದ ದೂರವಿರುದ ಸ್ಥಳಕ್ಕೆ ತೆರಳಲು ರೈತರಿಗೆ ತೊಂದರೆಯಾಗುತ್ತದೆ. ಈಗಾಗಲೇ ಬೆಳೆಸಿರುವ ಮರಗಳನ್ನು ಕಡಿಯುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಪರಿಸರ ಸಂರಕ್ಷಣೆಗಾಗಿ ಈ ಮರ, ಗಿಡಗಳನ್ನು ಕಡಿಯಕೂಡದು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಹಾಪ್ಕಾಮ್ಸ್ನ ರಾಜ್ಯ ಪ್ರತಿನಿಧಿ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರಮೂರ್ತಿ, ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ತೋಟಗಾರಿಕೆ ಸಂಘದ ನಿರ್ದೇಶಕರಾದ ಎಸ್.ಜಿ.ಸತ್ಯನಾರಾಯಣ ನಾಯ್ಡು, ಶ್ವೇತಾ ವಿಶ್ವನಾಥ್, ಖಜಾಂಚಿ ನಾಗರಾಜ್ ಬೇದ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>