<p><strong>ಚಿತ್ರದುರ್ಗ:</strong> ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳ ಕನಸು ನನಸಾಗುವ ಕ್ಷಣಕ್ಕೆ ಕ್ಷಣಗಣನೆ ಶುರುವಾಗಿದೆ.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೌಶಲಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಫೆ. 1ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ.</p>.<p>ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ಇತ್ಯಾದಿ ನಡೆಸಲು ಅನುಕೂಲವಾಗುವಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಮಾಹಿತಿ ನೀಡುವ ಸಲುವಾಗಿ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ.</p>.<p>ಬಿಇ ಪದವೀಧರರಿಗೆ ಪ್ರತಿಷ್ಠಿತ ಐಟಿ ಕಂಪನಿಗಳು ಸಹ ಈ ಬಾರಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿರುವ 18ರಿಂದ 35 ವರ್ಷ ವಯೋಮಿತಿಯ ಯುವಕ– ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.</p>.<p>ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿರುವ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗೂಗಲ್ ಫಾರಂ ಬಳಸಿ ಈಗಾಗಲೇ 6,250ಕ್ಕೂ ಅಧಿಕ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 3,110ಕ್ಕೂ ಹೆಚ್ಚು ಪುರುಷ ಹಾಗೂ 3,100ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳಿದ್ದಾರೆ.</p>.<p>‘ಜಿಲ್ಲೆಯ ಯುವಕ– ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸರ್ಕಾರ ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿಗಳಿಗೆ ಭತ್ಯೆ ನೀಡುತ್ತಿದ್ದು, ಈ ಯೋಜನೆಯ ಎಲ್ಲ ಫಲಾನುಭವಿಗಳು ತಪ್ಪದೆ ಉದ್ಯೋಗಮೇಳದಲ್ಲಿ ಪಾಲ್ಗೊಂಡು, ಕೆಲಸ ಪಡೆದುಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ.</p>.<p>ಉದ್ಯೋಗ ಮೇಳವು ಅವಕಾಶ ವಂಚಿತ ಸಮುದಾಯಗಳ ಪಾಲಿಗೆ ವರದಾನವಾಗಿದೆ. 1,739ಕ್ಕೂ ಹೆಚ್ಚು ಪರಿಶಿಷ್ಟ ಜಾತಿ, 1,042ಕ್ಕೂ ಹೆಚ್ಚು ಪರಿಶಿಷ್ಟ ಪಂಗಡ, 2,326ಕ್ಕೂ ಹೆಚ್ಚು ಹಿಂದುಳಿದ ವರ್ಗ, 129 ಅಲ್ಪಸಂಖ್ಯಾತ, 977 ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ.</p>.<p>6,250 ಅಭ್ಯರ್ಥಿಗಳಲ್ಲಿ ಬಿಎಎಂಎಸ್, ಬಿಇ, ಕೃಷಿ ಹಾಗೂ ತೋಟಗಾರಿಕೆ ಸ್ನಾತಕೋತ್ತರ ಪದವಿ, ಎಂಎಸ್ಸಿ, ಎಂಎ,ಬಿ.ಎಡ್, ಪದವಿ, ಬಿ.ಫಾರ್ಮಸಿ, ನರ್ಸಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವವರು ಇದ್ದಾರೆ.</p>.<p>ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿ ವಿವಿಧ ಕ್ಷೇತ್ರಗಳ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಚಿತ್ರದುರ್ಗ ಮಾತ್ರವಲ್ಲದೆ ಬೆಂಗಳೂರು, ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರಮುಖ ಕಂಪನಿಗಳನ್ನು ಆಹ್ವಾನಿಸಲಾಗಿದೆ.</p>.<div><blockquote>ಪ್ರತಿ ಅಭ್ಯರ್ಥಿ ಕನಿಷ್ಠ 5ರಿಂದ 6 ಸ್ವವಿವರದ ಪ್ರತಿ ಹಾಗೂ ಪೂರಕ ದಾಖಲೆಗಳೊಂದಿಗೆ ಹಾಜರಾಗಬೇಕು. ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳಲು ಮುಂದಾಗಬೇಕು</blockquote><span class="attribution"> ಟಿ.ವೆಂಕಟೇಶ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳ ಕನಸು ನನಸಾಗುವ ಕ್ಷಣಕ್ಕೆ ಕ್ಷಣಗಣನೆ ಶುರುವಾಗಿದೆ.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೌಶಲಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಫೆ. 1ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ.</p>.<p>ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ಇತ್ಯಾದಿ ನಡೆಸಲು ಅನುಕೂಲವಾಗುವಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಮಾಹಿತಿ ನೀಡುವ ಸಲುವಾಗಿ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ.</p>.<p>ಬಿಇ ಪದವೀಧರರಿಗೆ ಪ್ರತಿಷ್ಠಿತ ಐಟಿ ಕಂಪನಿಗಳು ಸಹ ಈ ಬಾರಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿರುವ 18ರಿಂದ 35 ವರ್ಷ ವಯೋಮಿತಿಯ ಯುವಕ– ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.</p>.<p>ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿರುವ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗೂಗಲ್ ಫಾರಂ ಬಳಸಿ ಈಗಾಗಲೇ 6,250ಕ್ಕೂ ಅಧಿಕ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 3,110ಕ್ಕೂ ಹೆಚ್ಚು ಪುರುಷ ಹಾಗೂ 3,100ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳಿದ್ದಾರೆ.</p>.<p>‘ಜಿಲ್ಲೆಯ ಯುವಕ– ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸರ್ಕಾರ ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿಗಳಿಗೆ ಭತ್ಯೆ ನೀಡುತ್ತಿದ್ದು, ಈ ಯೋಜನೆಯ ಎಲ್ಲ ಫಲಾನುಭವಿಗಳು ತಪ್ಪದೆ ಉದ್ಯೋಗಮೇಳದಲ್ಲಿ ಪಾಲ್ಗೊಂಡು, ಕೆಲಸ ಪಡೆದುಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ.</p>.<p>ಉದ್ಯೋಗ ಮೇಳವು ಅವಕಾಶ ವಂಚಿತ ಸಮುದಾಯಗಳ ಪಾಲಿಗೆ ವರದಾನವಾಗಿದೆ. 1,739ಕ್ಕೂ ಹೆಚ್ಚು ಪರಿಶಿಷ್ಟ ಜಾತಿ, 1,042ಕ್ಕೂ ಹೆಚ್ಚು ಪರಿಶಿಷ್ಟ ಪಂಗಡ, 2,326ಕ್ಕೂ ಹೆಚ್ಚು ಹಿಂದುಳಿದ ವರ್ಗ, 129 ಅಲ್ಪಸಂಖ್ಯಾತ, 977 ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ.</p>.<p>6,250 ಅಭ್ಯರ್ಥಿಗಳಲ್ಲಿ ಬಿಎಎಂಎಸ್, ಬಿಇ, ಕೃಷಿ ಹಾಗೂ ತೋಟಗಾರಿಕೆ ಸ್ನಾತಕೋತ್ತರ ಪದವಿ, ಎಂಎಸ್ಸಿ, ಎಂಎ,ಬಿ.ಎಡ್, ಪದವಿ, ಬಿ.ಫಾರ್ಮಸಿ, ನರ್ಸಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವವರು ಇದ್ದಾರೆ.</p>.<p>ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿ ವಿವಿಧ ಕ್ಷೇತ್ರಗಳ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಚಿತ್ರದುರ್ಗ ಮಾತ್ರವಲ್ಲದೆ ಬೆಂಗಳೂರು, ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರಮುಖ ಕಂಪನಿಗಳನ್ನು ಆಹ್ವಾನಿಸಲಾಗಿದೆ.</p>.<div><blockquote>ಪ್ರತಿ ಅಭ್ಯರ್ಥಿ ಕನಿಷ್ಠ 5ರಿಂದ 6 ಸ್ವವಿವರದ ಪ್ರತಿ ಹಾಗೂ ಪೂರಕ ದಾಖಲೆಗಳೊಂದಿಗೆ ಹಾಜರಾಗಬೇಕು. ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳಲು ಮುಂದಾಗಬೇಕು</blockquote><span class="attribution"> ಟಿ.ವೆಂಕಟೇಶ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>