ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ಶಾಲೆಗಳು ಪುನರಾರಂಭಗೊಂಡವು. ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಟಿ ಸುರಿದು ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ಶಾಲೆ ಪುನರಾರಂಭದ ಎರಡು ದಿನ ಮುನ್ನವೇ ಶಿಕ್ಷಕರು ಸಿದ್ಧತೆ ಮಾಡಿಕೊಂಡಿದ್ದರು. ಕೊಠಡಿಗಳನ್ನು ಶುಚಿಗೊಳಿಸಿ, ಮಾವಿನತೋರಣ ಕಟ್ಟಿದ್ದರು. ವಿ.ಪಿ.ಬಡಾವಣೆಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಹಬ್ಬದ ವಾತಾವಣ ನಿರ್ಮಾಣ ಮಾಡಲಾಗಿತ್ತು.