‘ವಾರದ ಹಿಂದೆ ಚಿರತೆ ಇಲ್ಲಿ ಓಡಾಡಿರುವ ಗುರುತುಗಳಿವೆ. ಅರಣ್ಯ ಇಲಾಖೆಯವರು ಬೋನ್ ಅಳವಡಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ನಿತ್ಯ ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ. ರಾತ್ರಿ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ರೈತರು ಹೋಗುತ್ತಿಲ್ಲ. ಒಂದು ಕುರಿ ತಿಂದಿರುವ ಬಗ್ಗೆ ಗ್ರಾಮಸ್ಥರು ಮಾತನಾಡುತ್ತಿದ್ದರು. ಜನ, ದನಕರು, ಕುರಿ ರಕ್ಷಣೆಗೆ ಸಂಬಂಧಪಟ್ಟವರು ಮುಂದಾಗಬೇಕು’ ಎಂದು ಹೆಬ್ಬಳ್ಳಿ ಮಲ್ಲಿಕಾರ್ಜುನ ತಿಳಿಸಿದರು.