ಚಿತ್ರದುರ್ಗ: ಬಳ್ಳಾರಿಯಿಂದ ಬೆಂಗಳೂರಿಗೆ ಸ್ಪಿರಿಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹಿರಿಯೂರು ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿ ಆಗಿದೆ.
ಹಿರಿಯೂರು ತಾಲ್ಲೂಕಿನ ವಡ್ಡನಹಳ್ಳಿ ಗೇಟ್ ಬಳಿ ಗುರುವಾರ ಬೆಳಿಗ್ಗೆ ಲಾರಿ ಉರುಳಿ ಬಿದ್ದಿದ್ದು ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಧಾವಿಸಿ ಹೆಚ್ಚಿನ ಅನಾಹುತ ಆಗದಂತೆ ತಡೆದಿದ್ದಾರೆ.
ಸ್ಪಿರಿಟ್ ಹಾಗೂ ಲಾರಿ ಸಂಪೂರ್ಣ ಭಸ್ಮವಾಗಿದೆ. ಚಾಲಕನ ಕೈ ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.