<p><strong>ಚಿತ್ರದುರ್ಗ:</strong> ಗಣಿಬಾಧಿತ ಪ್ರದೇಶಗಳ ನಿವಾಸಿಗಳಿಗೆ ಗಣಿ ಕಂಪನಿಗಳು ಮೂಲ ಸೌಲಭ್ಯ ಕಲ್ಪಿಸದೆ ವಂಚಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಗಣಿ ಕಂಪನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೊಳಲ್ಕೆರೆ ತಾಲ್ಲೂಕಿನ ಮದಕರಿಪುರ, ಕಾಗಳಗೆರೆ, ಮುತ್ತುಗದೂರು, ತಣಿಗೆಹಳ್ಳಿ ಗ್ರಾಮಗಳ ನಿವಾಸಿಗಳು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಜತೆಗೆ ಶಿಕ್ಷಣ, ಆರೋಗ್ಯ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದು ದೂರಿದರು.</p>.<p>ಗಣಿ ಕಂಪನಿಗಳು ನಿರಂತರವಾಗಿ ಅದಿರು ಸಾಗಿಸುತ್ತಿರುವುದರಿಂದ ಬೆಳೆಗಳು ನಾಶವಾಗುತ್ತಿವೆ. ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿರುವ ಹಣವನ್ನು ಪ್ರಭಾವಿಗಳು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ಇಲ್ಲಿನ ನಿವಾಸಿಗಳಿಗೆ ಮಂಜೂರಾಗಿರುವ ಮನೆಗಳು ಅನ್ಯರ ಪಾಲಾಗುತ್ತಿವೆ. ಆ ಭಾಗದ ಶಾಸಕರು ತಮಗೆ ಬೇಕಾದವರಿಗೆ ಮನೆಗಳನ್ನು ನೀಡಲು ಪಟ್ಟಿ ಮಾಡಿ ಜಿಲ್ಲಾಧಿಕಾರಿಗೆ ಕಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ನಿಜವಾಗಿಯೂ ಮೂಲ ಸೌಲಭ್ಯಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ಈ ನೆಲದ ಸಂಪನ್ಮೂಲ ಕೊಳ್ಳೆ ಹೊಡೆಯುತ್ತಿರುವ ಗಣಿ ಮಾಲೀಕರು ಸ್ಥಳೀಯರಿಗೆ ಉದ್ಯೋಗ ನೀಡದೆ ಹೊರ ರಾಜ್ಯಗಳಿಂದ ಕೆಲಸಗಾರರನ್ನು ಕರೆಯಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗಣಿ ಕಂಪನಿಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗವುದು’ ಎಂದು ಎಚ್ಚರಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಮುಖಂಡರಾದ ಜಿ.ಶಿವಣ್ಣ, ರಂಗಣ್ಣ, ಮದನ್, ಹರೀಶ್, ಸಿದ್ದೇಶ್, ಧನುನಾಯ್ಕ, ಅಜ್ಜಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಗಣಿಬಾಧಿತ ಪ್ರದೇಶಗಳ ನಿವಾಸಿಗಳಿಗೆ ಗಣಿ ಕಂಪನಿಗಳು ಮೂಲ ಸೌಲಭ್ಯ ಕಲ್ಪಿಸದೆ ವಂಚಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಗಣಿ ಕಂಪನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೊಳಲ್ಕೆರೆ ತಾಲ್ಲೂಕಿನ ಮದಕರಿಪುರ, ಕಾಗಳಗೆರೆ, ಮುತ್ತುಗದೂರು, ತಣಿಗೆಹಳ್ಳಿ ಗ್ರಾಮಗಳ ನಿವಾಸಿಗಳು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಜತೆಗೆ ಶಿಕ್ಷಣ, ಆರೋಗ್ಯ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದು ದೂರಿದರು.</p>.<p>ಗಣಿ ಕಂಪನಿಗಳು ನಿರಂತರವಾಗಿ ಅದಿರು ಸಾಗಿಸುತ್ತಿರುವುದರಿಂದ ಬೆಳೆಗಳು ನಾಶವಾಗುತ್ತಿವೆ. ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿರುವ ಹಣವನ್ನು ಪ್ರಭಾವಿಗಳು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ಇಲ್ಲಿನ ನಿವಾಸಿಗಳಿಗೆ ಮಂಜೂರಾಗಿರುವ ಮನೆಗಳು ಅನ್ಯರ ಪಾಲಾಗುತ್ತಿವೆ. ಆ ಭಾಗದ ಶಾಸಕರು ತಮಗೆ ಬೇಕಾದವರಿಗೆ ಮನೆಗಳನ್ನು ನೀಡಲು ಪಟ್ಟಿ ಮಾಡಿ ಜಿಲ್ಲಾಧಿಕಾರಿಗೆ ಕಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ನಿಜವಾಗಿಯೂ ಮೂಲ ಸೌಲಭ್ಯಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ಈ ನೆಲದ ಸಂಪನ್ಮೂಲ ಕೊಳ್ಳೆ ಹೊಡೆಯುತ್ತಿರುವ ಗಣಿ ಮಾಲೀಕರು ಸ್ಥಳೀಯರಿಗೆ ಉದ್ಯೋಗ ನೀಡದೆ ಹೊರ ರಾಜ್ಯಗಳಿಂದ ಕೆಲಸಗಾರರನ್ನು ಕರೆಯಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗಣಿ ಕಂಪನಿಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗವುದು’ ಎಂದು ಎಚ್ಚರಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಮುಖಂಡರಾದ ಜಿ.ಶಿವಣ್ಣ, ರಂಗಣ್ಣ, ಮದನ್, ಹರೀಶ್, ಸಿದ್ದೇಶ್, ಧನುನಾಯ್ಕ, ಅಜ್ಜಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>