ಶನಿವಾರ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಭದ್ರಾ ಮೇಲ್ದಂಡೆ ಮುಖ್ಯ ಎಂಜಿನಿಯರ್ ರಾಘವನ್, ಅಧೀಕ್ಷಕ ಎಂಜಿನಿಯರ್ ವೇಣುಗೋಪಾಲ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ಮೈಸೂರು ವಿಭಾಗದ ರೈಲ್ವೆ ಇಲಾಖೆ ಅಧಿಕಾರಿಗಳಾದ ರವಿಚಂದ್ರನ್ ಹಾಗೂ ವೆಂಕಟರಾಜು ಅವರೊಂದಿಗೆ ಕಾಮಗಾರಿ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಿದ್ದಾರೆ ಎಂದುತಾಲ್ಲೂಕು ಪಂಚಾಯಿತಿ ಸದಸ್ಯ ಯಶವಂತರಾಜು ಮಾಹಿತಿ ನೀಡಿದರು.