<p>ಚಿತ್ರದುರ್ಗ: ನಗರದ ಮುರುಘಾ ಮಠದ ದರ್ಬಾರ್ ಹಾಲ್ನಲ್ಲಿದ್ದ 22 ಕೆ.ಜಿ. ತೂಕದ ಶಿವಮೂರ್ತಿ ಮುರುಘಾ ಸ್ವಾಮೀಜಿಯವರ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ.</p>.<p>ಈ ಕುರಿತು ಮಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಮಠದ ಸಿಬ್ಬಂದಿಯೊಬ್ಬರು ಬುಧವಾರ ದರ್ಬಾರ್ ಹಾಲ್ಗೆ ತೆರಳಿದಾಗ ಪುತ್ಥಳಿ ಕಳ್ಳತನ ಆಗಿರುವುದು ಪತ್ತೆಯಾಗಿದೆ. ಜುಲೈ 4ರಂದು ಕಡೆಯದಾಗಿ ಪ್ರತಿಮೆ ನೋಡಿದ್ದಾಗಿ ಅವರು ತಿಳಿಸಿದ್ದಾರೆ. ಮಠದಲ್ಲಿ ಆಂತರಿಕ ತನಿಖೆ ನಡೆಸಿದಾಗ ಪುತ್ಥಳಿ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 21 ಇಂಚು ಎತ್ತರದ ಪುತ್ಥಳಿಯು ₹ 16 ಲಕ್ಷ ಮೌಲ್ಯ ಹೊಂದಿದೆ. ಮುರುಘಾ ಮಠದ ಟ್ರಸ್ಟ್ ಮತ್ತು ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣಾ ಸಮಿತಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಅವರ ಮೌಖಿಕ ಸೂಚನೆ ಮೇರೆಗೆ ದೂರು ನೀಡಲಾಗುತ್ತಿದೆ ಎಂದು ಅವರು ಬಸವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಶಿವಮೂರ್ತಿ ಮುರುಘಾ ಸ್ವಾಮೀಜಿ ಪೀಠಾರೋಹಣದ ರಜತೋತ್ಸವ ಆಚರಣೆ ಸಂದರ್ಭದಲ್ಲಿ ವಿವಿಧ ಮಠಾಧೀಶರು ಬೆಳ್ಳಿ ಪುತ್ಥಳಿ ಅರ್ಪಿಸಿದ್ದರು. ಸದ್ಯ ಶಿವಮೂರ್ತಿ ಸ್ವಾಮೀಜಿ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಬಂಧನದ ನಂತರ ಮಠದಲ್ಲಿದ್ದ ಕೆಲ ಛಾಯಾಚಿತ್ರಗಳು ಕೂಡ ಕಾಣೆಯಾಗಿದ್ದವು. ಈ ಬಗ್ಗೆಯೂ ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ನಗರದ ಮುರುಘಾ ಮಠದ ದರ್ಬಾರ್ ಹಾಲ್ನಲ್ಲಿದ್ದ 22 ಕೆ.ಜಿ. ತೂಕದ ಶಿವಮೂರ್ತಿ ಮುರುಘಾ ಸ್ವಾಮೀಜಿಯವರ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ.</p>.<p>ಈ ಕುರಿತು ಮಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಮಠದ ಸಿಬ್ಬಂದಿಯೊಬ್ಬರು ಬುಧವಾರ ದರ್ಬಾರ್ ಹಾಲ್ಗೆ ತೆರಳಿದಾಗ ಪುತ್ಥಳಿ ಕಳ್ಳತನ ಆಗಿರುವುದು ಪತ್ತೆಯಾಗಿದೆ. ಜುಲೈ 4ರಂದು ಕಡೆಯದಾಗಿ ಪ್ರತಿಮೆ ನೋಡಿದ್ದಾಗಿ ಅವರು ತಿಳಿಸಿದ್ದಾರೆ. ಮಠದಲ್ಲಿ ಆಂತರಿಕ ತನಿಖೆ ನಡೆಸಿದಾಗ ಪುತ್ಥಳಿ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 21 ಇಂಚು ಎತ್ತರದ ಪುತ್ಥಳಿಯು ₹ 16 ಲಕ್ಷ ಮೌಲ್ಯ ಹೊಂದಿದೆ. ಮುರುಘಾ ಮಠದ ಟ್ರಸ್ಟ್ ಮತ್ತು ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣಾ ಸಮಿತಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಅವರ ಮೌಖಿಕ ಸೂಚನೆ ಮೇರೆಗೆ ದೂರು ನೀಡಲಾಗುತ್ತಿದೆ ಎಂದು ಅವರು ಬಸವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಶಿವಮೂರ್ತಿ ಮುರುಘಾ ಸ್ವಾಮೀಜಿ ಪೀಠಾರೋಹಣದ ರಜತೋತ್ಸವ ಆಚರಣೆ ಸಂದರ್ಭದಲ್ಲಿ ವಿವಿಧ ಮಠಾಧೀಶರು ಬೆಳ್ಳಿ ಪುತ್ಥಳಿ ಅರ್ಪಿಸಿದ್ದರು. ಸದ್ಯ ಶಿವಮೂರ್ತಿ ಸ್ವಾಮೀಜಿ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಬಂಧನದ ನಂತರ ಮಠದಲ್ಲಿದ್ದ ಕೆಲ ಛಾಯಾಚಿತ್ರಗಳು ಕೂಡ ಕಾಣೆಯಾಗಿದ್ದವು. ಈ ಬಗ್ಗೆಯೂ ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>