<p><strong>ಚಿತ್ರದುರ್ಗ:</strong> ‘ವೈಚಾರಿಕ ಚಿಂತನೆಯ ನೆಲೆಗಟ್ಟಿನಲ್ಲಿ ರೂಪಿತಗೊಂಡ ದಿನಗಳನ್ನು ಕೆಲವರು ಭಯಪಡಿಸಲು ಬಳಸಿಕೊಂಡಿದ್ದಾರೆ. ಶ್ರೀಮಠವು ಎಲ್ಲಾ ದಿನಗಳಿಗೂ ಮಹತ್ವ ನೀಡಿದೆ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಕುಂಬಾರ ಗುಂಡಯ್ಯ ಶರಣೋತ್ಸವದಲ್ಲಿ ಮಾತನಾಡಿದ ಅವರು, ‘ಕುಂಬಾರ ಗುಂಡಯ್ಯನವರಿಗೂ ಮಣ್ಣಿಗೂ ಅವಿನಾಭಾವ ಸಂಬಂಧವಿದೆ. ಆ ಕಾರಣ ಈ ವಿಶೇಷ ದಿನದಂದು ಅವರ ಜಯಂತಿ ಆಚರಿಸಲಾಗುತ್ತಿದೆ’ ಎಂದರು.</p>.<p>‘ತನ್ನ ಕಸುಬಿನ ಜತೆಗೆ ಬಸವಣ್ಣನವರ ಆಶಯಕ್ಕೆ ಒತ್ತುಕೊಟ್ಟು ನಡೆದವರು ಕುಂಬಾರ ಗುಂಡಯ್ಯ. ನಮ್ಮ ಹಿರಿಯರು ಹುಣ್ಣಿಮೆ, ಅಮಾವಾಸ್ಯೆಗಳನ್ನು ವೈಜ್ಞಾನಿಕವಾಗಿ ನಿರೂಪಿಸಿದ್ದಾರೆ. ಇಂದು ಮಣ್ಣೆತ್ತಿನ ಅಮಾವಾಸ್ಯೆ. ಇದಕ್ಕೂ ವೈಜ್ಞಾನಿಕ ಮತು ತಾತ್ವಿಕ ನೆಲೆಗಟ್ಟು ಇದೆ’ ಎಂದು ತಿಳಿಸಿದರು.</p>.<p>‘ಬಸವಣ್ಣನವರು ಸಮಸಮಾಜ ನಿರ್ಮಾಣದ ಹಿನ್ನೆಲೆಯಲ್ಲಿ ಶೋಷಿತ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಅನುಭವ ಮಂಟಪ ಸ್ಥಾಪಿಸಿದರು. ಅದರ ಮುಂದುವರಿದ ಭಾಗವಾಗಿ ಮುರುಘಾ ಮಠದಲ್ಲಿ ಅಲಕ್ಷಿತ ಸಮುದಾಯಗಳಿಗೆ ಸರಿಯಾದ ದಿಕ್ಕನ್ನು ತೋರಿಸುವ ಕಾರ್ಯವಾಗುತ್ತಿದೆ’ ಎಂದು ಕುಂಬಾರ ಗುರುಪೀಠದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಹೇಳಿದರು.</p>.<p>‘ನಮ್ಮದು ಸಣ್ಣ ಸಮಾಜ. ನಾವು ಸಹ ಎಲ್ಲರಂತೆ ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಎಲ್ಲರ ಸಹಕಾರದ ಅಗತ್ಯವಿದೆ’ ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಮಠದ ಪದಾಧಿಕಾರಿಗಳಾದ ತಿಪ್ಪೇಸ್ವಾಮಿ, ವೈ.ಮೃತ್ಯುಂಜಯ, ತಿಪ್ಪೇರುದ್ರಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ವೈಚಾರಿಕ ಚಿಂತನೆಯ ನೆಲೆಗಟ್ಟಿನಲ್ಲಿ ರೂಪಿತಗೊಂಡ ದಿನಗಳನ್ನು ಕೆಲವರು ಭಯಪಡಿಸಲು ಬಳಸಿಕೊಂಡಿದ್ದಾರೆ. ಶ್ರೀಮಠವು ಎಲ್ಲಾ ದಿನಗಳಿಗೂ ಮಹತ್ವ ನೀಡಿದೆ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಕುಂಬಾರ ಗುಂಡಯ್ಯ ಶರಣೋತ್ಸವದಲ್ಲಿ ಮಾತನಾಡಿದ ಅವರು, ‘ಕುಂಬಾರ ಗುಂಡಯ್ಯನವರಿಗೂ ಮಣ್ಣಿಗೂ ಅವಿನಾಭಾವ ಸಂಬಂಧವಿದೆ. ಆ ಕಾರಣ ಈ ವಿಶೇಷ ದಿನದಂದು ಅವರ ಜಯಂತಿ ಆಚರಿಸಲಾಗುತ್ತಿದೆ’ ಎಂದರು.</p>.<p>‘ತನ್ನ ಕಸುಬಿನ ಜತೆಗೆ ಬಸವಣ್ಣನವರ ಆಶಯಕ್ಕೆ ಒತ್ತುಕೊಟ್ಟು ನಡೆದವರು ಕುಂಬಾರ ಗುಂಡಯ್ಯ. ನಮ್ಮ ಹಿರಿಯರು ಹುಣ್ಣಿಮೆ, ಅಮಾವಾಸ್ಯೆಗಳನ್ನು ವೈಜ್ಞಾನಿಕವಾಗಿ ನಿರೂಪಿಸಿದ್ದಾರೆ. ಇಂದು ಮಣ್ಣೆತ್ತಿನ ಅಮಾವಾಸ್ಯೆ. ಇದಕ್ಕೂ ವೈಜ್ಞಾನಿಕ ಮತು ತಾತ್ವಿಕ ನೆಲೆಗಟ್ಟು ಇದೆ’ ಎಂದು ತಿಳಿಸಿದರು.</p>.<p>‘ಬಸವಣ್ಣನವರು ಸಮಸಮಾಜ ನಿರ್ಮಾಣದ ಹಿನ್ನೆಲೆಯಲ್ಲಿ ಶೋಷಿತ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಅನುಭವ ಮಂಟಪ ಸ್ಥಾಪಿಸಿದರು. ಅದರ ಮುಂದುವರಿದ ಭಾಗವಾಗಿ ಮುರುಘಾ ಮಠದಲ್ಲಿ ಅಲಕ್ಷಿತ ಸಮುದಾಯಗಳಿಗೆ ಸರಿಯಾದ ದಿಕ್ಕನ್ನು ತೋರಿಸುವ ಕಾರ್ಯವಾಗುತ್ತಿದೆ’ ಎಂದು ಕುಂಬಾರ ಗುರುಪೀಠದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಹೇಳಿದರು.</p>.<p>‘ನಮ್ಮದು ಸಣ್ಣ ಸಮಾಜ. ನಾವು ಸಹ ಎಲ್ಲರಂತೆ ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಎಲ್ಲರ ಸಹಕಾರದ ಅಗತ್ಯವಿದೆ’ ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಮಠದ ಪದಾಧಿಕಾರಿಗಳಾದ ತಿಪ್ಪೇಸ್ವಾಮಿ, ವೈ.ಮೃತ್ಯುಂಜಯ, ತಿಪ್ಪೇರುದ್ರಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>