<p>ಚಿತ್ರದುರ್ಗ: ‘ಅಸಂಘಟಿತ ಕಾರ್ಮಿಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕಾಳಜಿ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ನಗರದ ರೋಟರಿ ಬಾಲಭವನದಲ್ಲಿ ಕಟ್ಟಡ ಕಾರ್ಮಿಕರ ಜಿಲ್ಲಾ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರು ದೇಶದ ದೊಡ್ಡ ಶಕ್ತಿ ಎನ್ನುವುದಕ್ಕಾಗಿ ಕೇಂದ್ರ ಸರ್ಕಾರ ಅನೇಕ ಸವಲತ್ತುಗಳನ್ನು ಒದಗಿಸಿದೆ. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ರಾಜ್ಯದಲ್ಲಿ 200 ವಸತಿ ಶಾಲೆಗಳನ್ನು ಕಟ್ಟಿಸಿದ್ದೆ. ಕಾರ್ಮಿಕರು ಕಡ್ಡಾಯವಾಗಿ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸಿ’ ಎಂದರು.</p>.<p>‘ಕಟ್ಟಡ ಕೆಲಸದಲ್ಲಿ ತೊಡಗಿಸಿಕೊಂಡಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮ ಪಾಲಿಸಬೇಕು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಜೀವನ್ ಸುರಕ್ಷಾ ಪಾಲಿಸಿಯನ್ನು ಮಾಡಿಸಬೇಕು. ಅಪಘಾತವಾದರೆ ಪರಿಹಾರ ಸಿಗುತ್ತದೆ’ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ ಹೇಳಿದರು.</p>.<p>‘ಕಾರ್ಮಿಕ ಇಲಾಖೆಯಿಂದ ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು. ಜೊತೆಗೆ ನಿಗದಿತ ಸಮಯಕ್ಕೆ ನವೀಕರಣ ಮಾಡಿಸಿಕೊಳ್ಳಬೇಕು. ಇಲ್ಲವಾದರೆ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರ’ ಎಂದು ಎಚ್ಚರಿಸಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಓ. ಜಗದೀಶ್ ಗುಂಡೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-44-43993851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಅಸಂಘಟಿತ ಕಾರ್ಮಿಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕಾಳಜಿ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ನಗರದ ರೋಟರಿ ಬಾಲಭವನದಲ್ಲಿ ಕಟ್ಟಡ ಕಾರ್ಮಿಕರ ಜಿಲ್ಲಾ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರು ದೇಶದ ದೊಡ್ಡ ಶಕ್ತಿ ಎನ್ನುವುದಕ್ಕಾಗಿ ಕೇಂದ್ರ ಸರ್ಕಾರ ಅನೇಕ ಸವಲತ್ತುಗಳನ್ನು ಒದಗಿಸಿದೆ. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ರಾಜ್ಯದಲ್ಲಿ 200 ವಸತಿ ಶಾಲೆಗಳನ್ನು ಕಟ್ಟಿಸಿದ್ದೆ. ಕಾರ್ಮಿಕರು ಕಡ್ಡಾಯವಾಗಿ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸಿ’ ಎಂದರು.</p>.<p>‘ಕಟ್ಟಡ ಕೆಲಸದಲ್ಲಿ ತೊಡಗಿಸಿಕೊಂಡಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮ ಪಾಲಿಸಬೇಕು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಜೀವನ್ ಸುರಕ್ಷಾ ಪಾಲಿಸಿಯನ್ನು ಮಾಡಿಸಬೇಕು. ಅಪಘಾತವಾದರೆ ಪರಿಹಾರ ಸಿಗುತ್ತದೆ’ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ ಹೇಳಿದರು.</p>.<p>‘ಕಾರ್ಮಿಕ ಇಲಾಖೆಯಿಂದ ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು. ಜೊತೆಗೆ ನಿಗದಿತ ಸಮಯಕ್ಕೆ ನವೀಕರಣ ಮಾಡಿಸಿಕೊಳ್ಳಬೇಕು. ಇಲ್ಲವಾದರೆ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರ’ ಎಂದು ಎಚ್ಚರಿಸಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಓ. ಜಗದೀಶ್ ಗುಂಡೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-44-43993851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>