<p><strong>ನಾಯಕನಹಟ್ಟಿ: </strong>ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.</p>.<p>ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಗ್ರಾಮಗಳ ಶಾಲೆಗಳಲ್ಲಿ ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅದರಲ್ಲೂ ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡಗಳನ್ನು, ಕೊಠಡಿಗಳನ್ನು ತೆರವೊಗೊಳಿಸಿ ಅದೇ ಜಾಗದಲ್ಲಿ ನೂತನ ಬೋಧನಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.</p>.<p>ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ₹ 25 ಲಕ್ಷ ವೆಚ್ಚದ ಸಿಸಿ ರಸ್ತೆ, ತಳಕು ಗ್ರಾಮದ ಎಸ್.ಜಿ.ಟಿ. ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ₹ 75.35 ಲಕ್ಷ ವೆಚ್ಚದ ಬೋಧನಾ ಕೊಠಡಿಗಳ ನಿರ್ಮಾಣ, ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದಲ್ಲಿ ₹ 20.38 ಲಕ್ಷ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಲಮ್ಮ ಪೂರ್ಣ ಓಬಯ್ಯ, ಉಪಾಧ್ಯಕ್ಷ ಈಗಲ ಬೋರಯ್ಯ, ಸದಸ್ಯರಾದ ಬಂಗಾರಪ್ಪ, ಬೋಸಯ್ಯ, ದ್ರಾಕ್ಷಾಯಣಿ ಚಿದಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಪಿ.ನಾಗೇಶ್ರೆಡ್ಡಿ, ಮುಖಂಡರಾದ ಜಿ.ಬಿ.ಮುದಿಯಪ್ಪ, ವೆಂಕಟೇಶ, ಅಜ್ಜಯ್ಯ, ಎಂ.ಬಿ.ಸಣ್ಣಬೋರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.</p>.<p>ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಗ್ರಾಮಗಳ ಶಾಲೆಗಳಲ್ಲಿ ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅದರಲ್ಲೂ ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡಗಳನ್ನು, ಕೊಠಡಿಗಳನ್ನು ತೆರವೊಗೊಳಿಸಿ ಅದೇ ಜಾಗದಲ್ಲಿ ನೂತನ ಬೋಧನಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.</p>.<p>ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ₹ 25 ಲಕ್ಷ ವೆಚ್ಚದ ಸಿಸಿ ರಸ್ತೆ, ತಳಕು ಗ್ರಾಮದ ಎಸ್.ಜಿ.ಟಿ. ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ₹ 75.35 ಲಕ್ಷ ವೆಚ್ಚದ ಬೋಧನಾ ಕೊಠಡಿಗಳ ನಿರ್ಮಾಣ, ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದಲ್ಲಿ ₹ 20.38 ಲಕ್ಷ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಲಮ್ಮ ಪೂರ್ಣ ಓಬಯ್ಯ, ಉಪಾಧ್ಯಕ್ಷ ಈಗಲ ಬೋರಯ್ಯ, ಸದಸ್ಯರಾದ ಬಂಗಾರಪ್ಪ, ಬೋಸಯ್ಯ, ದ್ರಾಕ್ಷಾಯಣಿ ಚಿದಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಪಿ.ನಾಗೇಶ್ರೆಡ್ಡಿ, ಮುಖಂಡರಾದ ಜಿ.ಬಿ.ಮುದಿಯಪ್ಪ, ವೆಂಕಟೇಶ, ಅಜ್ಜಯ್ಯ, ಎಂ.ಬಿ.ಸಣ್ಣಬೋರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>