<p>ಚಿತ್ರದುರ್ಗ: ‘ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿ ಮೂಡಿಸುವಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮ ವಾಸ್ತವ್ಯದ ಮೂಲಕ ವಿದ್ಯಾರ್ಥಿನಿಯರು ಗ್ರಾಮೀಣ ಬದುಕಿನ ಸವಾಲುಗಳನ್ನು ಹತ್ತಿರದಿಂದ ಕಂಡಿದ್ದಾರೆ’ ಎಂದು ಪ್ರಾಂಶುಪಾಲ ಶಿವಣ್ಣ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಹುಲ್ಲೂರು ಗ್ರಾಮದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹುಲ್ಲೂರಿನ ಜನ ಹಾಗೂ ಇಲ್ಲಿನ ಸಾಂಸ್ಕೃತಿಕ ಪರಿಸರವು ನಮ್ಮ ಶಿಬಿರಕ್ಕೆ ವಿಶೇಷ ಸಹಕಾರ ನೀಡಿದೆ. ಈ ಊರಿನಲ್ಲಿರುವ ಸಂಘ ಸಂಸ್ಥೆಗಳು ಸೇವಾ ಮನೋಭಾವ, ಅರ್ಪಣ ಭಾವ ಹೊಂದಿವೆ’ ಎಂದರು.</p>.<p>‘ವಿದ್ಯಾರ್ಥಿನಿಯರ ಸೇವಾ ಮನೋಭಾವ ಕಂಡು ಸಂತೋಷವಾಗಿದೆ. ಒಂದು ವಾರ ನಮ್ಮ ಊರಿನಲ್ಲಿ ಸಾಂಸ್ಕೃತಿಕ ವಾತಾವರಣ ಸೃಷ್ಟಿ ಮಾಡಿದ್ದರು’ ಎಂದು ಊರಿನ ಮುಖಂಡ ದೇವರಾಜ್ ಹೇಳಿದರು.</p>.<p>ಎನ್ಎಸ್ಎಸ್ ಯೋಜನಾಧಿಕಾರಿ ಗಿರೀಶ್, ಸಹ ಶಿಬಿರಾಧಿಕಾರಿಗಳಾದ ಎಂ.ಮೋಹನ್ ಕುಮಾರ್, ಆರ್.ಶಿವಪ್ರಸಾದ್, ಮುಖಂಡರಾದ ಕಲ್ಲೇಶ್, ದೇವರಾಜ್, ಪ್ರವೀಣ್, ನಾಗೇಶ್, ಮಹೇಶ್ವರಪ್ಪ, ರಾಮಚಂದ್ರ ರೆಡ್ಡಿ, ರಾಜಪ್ಪ, ಸುಭಾಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-44-862876865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿ ಮೂಡಿಸುವಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮ ವಾಸ್ತವ್ಯದ ಮೂಲಕ ವಿದ್ಯಾರ್ಥಿನಿಯರು ಗ್ರಾಮೀಣ ಬದುಕಿನ ಸವಾಲುಗಳನ್ನು ಹತ್ತಿರದಿಂದ ಕಂಡಿದ್ದಾರೆ’ ಎಂದು ಪ್ರಾಂಶುಪಾಲ ಶಿವಣ್ಣ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಹುಲ್ಲೂರು ಗ್ರಾಮದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹುಲ್ಲೂರಿನ ಜನ ಹಾಗೂ ಇಲ್ಲಿನ ಸಾಂಸ್ಕೃತಿಕ ಪರಿಸರವು ನಮ್ಮ ಶಿಬಿರಕ್ಕೆ ವಿಶೇಷ ಸಹಕಾರ ನೀಡಿದೆ. ಈ ಊರಿನಲ್ಲಿರುವ ಸಂಘ ಸಂಸ್ಥೆಗಳು ಸೇವಾ ಮನೋಭಾವ, ಅರ್ಪಣ ಭಾವ ಹೊಂದಿವೆ’ ಎಂದರು.</p>.<p>‘ವಿದ್ಯಾರ್ಥಿನಿಯರ ಸೇವಾ ಮನೋಭಾವ ಕಂಡು ಸಂತೋಷವಾಗಿದೆ. ಒಂದು ವಾರ ನಮ್ಮ ಊರಿನಲ್ಲಿ ಸಾಂಸ್ಕೃತಿಕ ವಾತಾವರಣ ಸೃಷ್ಟಿ ಮಾಡಿದ್ದರು’ ಎಂದು ಊರಿನ ಮುಖಂಡ ದೇವರಾಜ್ ಹೇಳಿದರು.</p>.<p>ಎನ್ಎಸ್ಎಸ್ ಯೋಜನಾಧಿಕಾರಿ ಗಿರೀಶ್, ಸಹ ಶಿಬಿರಾಧಿಕಾರಿಗಳಾದ ಎಂ.ಮೋಹನ್ ಕುಮಾರ್, ಆರ್.ಶಿವಪ್ರಸಾದ್, ಮುಖಂಡರಾದ ಕಲ್ಲೇಶ್, ದೇವರಾಜ್, ಪ್ರವೀಣ್, ನಾಗೇಶ್, ಮಹೇಶ್ವರಪ್ಪ, ರಾಮಚಂದ್ರ ರೆಡ್ಡಿ, ರಾಜಪ್ಪ, ಸುಭಾಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-44-862876865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>