<p><strong>ಚಿತ್ರದುರ್ಗ:</strong> ‘ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ, ಪರಸ್ಪರ ಸಹಕಾರ, ಸಾಮರಸ್ಯ ಮೂಡಿಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಿದೆ’ ಎಂದು ಎಸ್ಜೆಎಂಐಟಿ ಪ್ರಾಂಶುಪಾಲ ಪಿ.ಬಿ.ಭರತ್ ತಿಳಿಸಿದರು.</p>.<p>ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರದಲ್ಲಿ ಎಸ್ಜೆಎಂಐಟಿ ಕಾಲೇಜಿನ ವತಿಯಿಂದ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸಂಘಟನಾತ್ಮಕ ಹಾಗೂ ನಾಯಕತ್ವ ಗುಣ ಕಲಿಸುತ್ತದೆ. ಸಮಾಜ ಸೇವೆಯ ಪರಿಕಲ್ಪನೆ ಮೂಡಿಸುತ್ತದೆ. ಸಮಾಜಕ್ಕೆ ವಿಶೇಷ ಕೊಡುಗೆ ನೀಡಲು ಪ್ರೆರೇಪಣೆ ನೀಡುತ್ತದೆ’ ಎಂದರು.</p>.<p>‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಎನ್ಎಸ್ಎಸ್, ಯೋಗ, ಕ್ರೀಡೆ ವಿಷಯಗಳನ್ನು ಅಳವಡಿಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ’ ಎಂದು ತಿಳಿಸಿದರು.</p>.<p>‘ಶಿಬಿರಕ್ಕೆ ಸಹಕಾರ ನೀಡುತ್ತೇವೆ. ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಆಗಬಹುದಾದ ಸಹಾಯ ಮಾಡಿ ಶಿಬಿರ ಯಶಸ್ವಿಯಾಗಲು ಕೈಜೋಡಿಸುತ್ತೇವೆ’ ಎಂದು ಟಿ.ನುಲೇನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂತಮ್ಮ ನಾಗರಾಜ್ ಹೇಳಿದರು.</p>.<p>ಐಕ್ಯುಎಸಿ ಸಂಚಾಲಕ ಎ.ಎಂ.ರಾಜೇಶ್, ಡೀನ್ ಅಕಾಡೆಮಿಕ್ ಎಸ್.ಸಿ.ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಸಿ.ರಾಜಪ್ಪ, ಟಿ.ಮಹೇಶ್ವರಪ್ಪ, ಮುಖ್ಯಶಿಕ್ಷಕ ಎಸ್.ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ, ಪರಸ್ಪರ ಸಹಕಾರ, ಸಾಮರಸ್ಯ ಮೂಡಿಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಿದೆ’ ಎಂದು ಎಸ್ಜೆಎಂಐಟಿ ಪ್ರಾಂಶುಪಾಲ ಪಿ.ಬಿ.ಭರತ್ ತಿಳಿಸಿದರು.</p>.<p>ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರದಲ್ಲಿ ಎಸ್ಜೆಎಂಐಟಿ ಕಾಲೇಜಿನ ವತಿಯಿಂದ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸಂಘಟನಾತ್ಮಕ ಹಾಗೂ ನಾಯಕತ್ವ ಗುಣ ಕಲಿಸುತ್ತದೆ. ಸಮಾಜ ಸೇವೆಯ ಪರಿಕಲ್ಪನೆ ಮೂಡಿಸುತ್ತದೆ. ಸಮಾಜಕ್ಕೆ ವಿಶೇಷ ಕೊಡುಗೆ ನೀಡಲು ಪ್ರೆರೇಪಣೆ ನೀಡುತ್ತದೆ’ ಎಂದರು.</p>.<p>‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಎನ್ಎಸ್ಎಸ್, ಯೋಗ, ಕ್ರೀಡೆ ವಿಷಯಗಳನ್ನು ಅಳವಡಿಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ’ ಎಂದು ತಿಳಿಸಿದರು.</p>.<p>‘ಶಿಬಿರಕ್ಕೆ ಸಹಕಾರ ನೀಡುತ್ತೇವೆ. ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಆಗಬಹುದಾದ ಸಹಾಯ ಮಾಡಿ ಶಿಬಿರ ಯಶಸ್ವಿಯಾಗಲು ಕೈಜೋಡಿಸುತ್ತೇವೆ’ ಎಂದು ಟಿ.ನುಲೇನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂತಮ್ಮ ನಾಗರಾಜ್ ಹೇಳಿದರು.</p>.<p>ಐಕ್ಯುಎಸಿ ಸಂಚಾಲಕ ಎ.ಎಂ.ರಾಜೇಶ್, ಡೀನ್ ಅಕಾಡೆಮಿಕ್ ಎಸ್.ಸಿ.ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಸಿ.ರಾಜಪ್ಪ, ಟಿ.ಮಹೇಶ್ವರಪ್ಪ, ಮುಖ್ಯಶಿಕ್ಷಕ ಎಸ್.ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>