<p>ನಾಯಕನಹಟ್ಟಿ (ಚಿತ್ರದುರ್ಗ) ಪ್ರೌಢಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದ ಆರೋಪವಿದ್ದ ಶಿಕ್ಷಕ ಎಚ್.ಒ.ರಾಜಣ್ಣ ಅವರನ್ನು ಪೊಲೀಸರು ಪೋಕ್ಸೊ ಅನ್ವಯ ಶನಿವಾರ ಬಂಧಿಸಿದ್ದಾರೆ. ಶಿಕ್ಷಕ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಪ್ರಕರಣ ದಾಖಲಾದ ಬಳಿಕ ಆರೋಪಿ ವಿಷ ಸೇವಿಸಿ ಆತ್ಮಹ್ಯತೆಗೆ ಯತ್ನಿಸಿದ್ದರಿಂದ ಶುಕ್ರವಾರ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಗರ್ಭಪಾತ ಮಾಡಿದ್ದ ಚಳ್ಳಕೆರೆಯ ವೈದ್ಯೆ ಶಂಕರಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದ್ದು, ವೈದ್ಯೆ ನಾಪತ್ತೆಯಾಗಿದ್ದಾರೆ.</p>.<p>ಜಿಲ್ಲಾ ಆರೋಗ್ಯಾಧಿಕಾರಿ ರೇಣುಪ್ರಸಾದ್ ನೇತೃತ್ವದಲ್ಲಿ ತಹಶೀಲ್ದಾರ್ ರೆಹಾನ್ ಪಾಷಾ, ತಾಲ್ಲೂಕು ಆರೋಗ್ಯಾಧಿಕಾರಿ ಎನ್.ಕಾಶಿ, ಡಾ.ಅಭಿನವ್ ಅವರ ತಂಡ ಖಾಸಗಿ ಆಸ್ಪತ್ರೆಗೆ ತೆರಳಿ ದಾಖಲೆ ಪರಿಶೀಲಿಸಿತು. ದಾಖಲೆಗಳಲ್ಲಿ ಲೋಪ ಇರುವುದು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿಡಿಪಿಐ ಎಂ.ಆರ್. ಮಂಜುನಾಥ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಿಕ್ಷಕ ರಾಜಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ತಿಳಿಸಿದ್ದಾರೆ.</p>.<p>ಶಿಕ್ಷಕ ಮತ್ತು ವೈದ್ಯೆ ವಿರುದ್ಧ ಶುಕ್ರವಾರ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ದೂರು ನೀಡಿದ್ದರು. ತಳಕು ಠಾಣೆಯ ಪಿಎಸ್ಐ ಕೆ.ಶಿವಕುಮಾರ್ ಪೋಕ್ಸೊ ಪ್ರಕರಣ ದಾಖಲಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-44-1157526004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಯಕನಹಟ್ಟಿ (ಚಿತ್ರದುರ್ಗ) ಪ್ರೌಢಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದ ಆರೋಪವಿದ್ದ ಶಿಕ್ಷಕ ಎಚ್.ಒ.ರಾಜಣ್ಣ ಅವರನ್ನು ಪೊಲೀಸರು ಪೋಕ್ಸೊ ಅನ್ವಯ ಶನಿವಾರ ಬಂಧಿಸಿದ್ದಾರೆ. ಶಿಕ್ಷಕ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಪ್ರಕರಣ ದಾಖಲಾದ ಬಳಿಕ ಆರೋಪಿ ವಿಷ ಸೇವಿಸಿ ಆತ್ಮಹ್ಯತೆಗೆ ಯತ್ನಿಸಿದ್ದರಿಂದ ಶುಕ್ರವಾರ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಗರ್ಭಪಾತ ಮಾಡಿದ್ದ ಚಳ್ಳಕೆರೆಯ ವೈದ್ಯೆ ಶಂಕರಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದ್ದು, ವೈದ್ಯೆ ನಾಪತ್ತೆಯಾಗಿದ್ದಾರೆ.</p>.<p>ಜಿಲ್ಲಾ ಆರೋಗ್ಯಾಧಿಕಾರಿ ರೇಣುಪ್ರಸಾದ್ ನೇತೃತ್ವದಲ್ಲಿ ತಹಶೀಲ್ದಾರ್ ರೆಹಾನ್ ಪಾಷಾ, ತಾಲ್ಲೂಕು ಆರೋಗ್ಯಾಧಿಕಾರಿ ಎನ್.ಕಾಶಿ, ಡಾ.ಅಭಿನವ್ ಅವರ ತಂಡ ಖಾಸಗಿ ಆಸ್ಪತ್ರೆಗೆ ತೆರಳಿ ದಾಖಲೆ ಪರಿಶೀಲಿಸಿತು. ದಾಖಲೆಗಳಲ್ಲಿ ಲೋಪ ಇರುವುದು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿಡಿಪಿಐ ಎಂ.ಆರ್. ಮಂಜುನಾಥ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಿಕ್ಷಕ ರಾಜಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ತಿಳಿಸಿದ್ದಾರೆ.</p>.<p>ಶಿಕ್ಷಕ ಮತ್ತು ವೈದ್ಯೆ ವಿರುದ್ಧ ಶುಕ್ರವಾರ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ದೂರು ನೀಡಿದ್ದರು. ತಳಕು ಠಾಣೆಯ ಪಿಎಸ್ಐ ಕೆ.ಶಿವಕುಮಾರ್ ಪೋಕ್ಸೊ ಪ್ರಕರಣ ದಾಖಲಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-44-1157526004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>