‘ಪರಿಸರ ಮನುಕುಲ ಸೇರಿ ಇಡೀ ಜೀವರಾಶಿಗಳಿಗೆ ಅತ್ಯಂತ ಅಗತ್ಯವಾಗಿ ಬೇಕಾಗಿರುವ ಸಂಪತ್ತಿನ ರಾಶಿಯಾಗಿದೆ. ಆದರೆ, ಮಾನವನ ದುರಾಸೆಯಿಂದಾಗಿ ಪ್ರಸ್ತುತ ದಿನಗಳಲ್ಲಿ ಪ್ರಾಕೃತಿಕ ಸಂಪತ್ತಾದ ನೀರನ್ನು ದುಡ್ಡು ಕೊಟ್ಟು ಕೊಳ್ಳಬೇಕಾದ ಪರಿಸ್ಥಿತಿ ನಾವೇ ನಿರ್ಮಾಣ ಮಾಡಿಕೊಂಡಿದ್ದೇವೆ. ಮುಂದೊಂದು ದಿನ ಗಾಳಿಗೂ ಇಂತಹ ದುಸ್ಥಿತಿ ಎದುರಾಗಬಾರದು. ಅದಕ್ಕಾಗಿ ದೇಶದ ಹಿಮಾಲಯ, ಈಶಾನ್ಯ ರಾಜ್ಯ, ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಪ್ರದೇಶ ಹಾಗೂ ನೈಸರ್ಗಿಕ ಸಂಪತ್ತನ್ನು ಉಳಿಸಬೇಕಾದ ಅಗತ್ಯವಿದೆ’ ಎಂದು ಮನವಿ ಮಾಡಿದರು.