ಚಿಕ್ಕಜಾಜೂರು ಸಮೀಪದ ಅಮೃತಾಪುರದ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಕೆಳ ಸೇತುವೆಯಲ್ಲಿ ಸಿಲುಕಿದ ಕಾರನ್ನು ಟ್ರ್ಯಾಕ್ಟರ್ ಮೂಲಕ ಎಳೆಯುತ್ತಿರುವುದು
ಚಿಕ್ಕಜಾಜೂರು ಸಮೀಪದ ಹನುಮನಕಟ್ಟೆ ಗ್ರಾಮದ ಬಳಿ ನೀರಿನಲ್ಲಿ ಸಿಲುಕಿದ ಆಟೋ
ಜಿಲ್ಲೆಯಲ್ಲಿರುವ ರೈಲ್ವೆ ಕೆಳಸೇತುವೆಗಳಲ್ಲಿ ಮಳೆ ನೀರು ನಿಂತು ಜನರು ಅನುಭವಿಸುತ್ತಿರುವ ಸಮಸ್ಯೆ ಗಮನಕ್ಕೆ ಬಂದಿದೆ. ಈಗಾಗಲೇ ಮಾಹಿತಿ ಪಡೆಯಲಾಗಿದೆ. ಶೀಘ್ರ ರೈಲ್ವೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುತ್ತದೆ.
ಟಿ.ವೆಂಕಟೇಶ್ ಜಿಲ್ಲಾಧಿಕಾರಿ
ಜಿಲ್ಲೆಯ ಬಹುತೇಕ ರೈಲ್ವೆ ಕೆಳಸೇತುವೆಗಳ ಮಾರ್ಗಗಳಲ್ಲಿ ಮಳೆ ಸುರಿದಾಗ ಸುಗಮವಾಗಿ ಜನ ಸಂಚರಿಸಲು ಸಾಧ್ಯವಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿರುವ ಕಾರಣ ಸಂಚಾರಕ್ಕೆ ಸಂಚಕಾರ ತಂದೊಡ್ಡುತ್ತಿವೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
-ಅಶೋಕ್ ಬೆಳಗಟ್ಟ ವಕೀಲರು ಚಿತ್ರದುರ್ಗ
ಸೋಮಗುದ್ದು ಬುಡ್ನಹಟ್ಟಿ ಚಿಕ್ಕಹಳ್ಳಿ ಗ್ರಾಮದ ರೈಲ್ವೆ ಕೆಳ ಸೇತುವೆಗಳಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದಿರುವುದರಿಂದ ಅಪಘಾತ ಸಾಮಾನ್ಯವಾಗಿವೆ. ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸೂಕ್ತ ನಿರ್ವಹಣೆ ಮೂಲಕ ಸಮಸ್ಯೆ ಬಗೆಹರಿಸಬೇಕು.
- ಬಸವರಾಜ ಚಳ್ಳಕೆರೆ ನಿವಾಸಿ
ಜನರ ಅನುಕೂಲಕ್ಕೆಂದು ನಿರ್ಮಿಸಿರುವ ಕೆಳ ಸೇತುವೆಗಳು ಸಮಸ್ಯೆಯ ಕೂಪಗಳಾಗಿವೆ. ಸೇತುವೆಯಲ್ಲಿ ಪಾದಚಾರಿ ಮಾರ್ಗ ನಿರ್ಮಿಸಬೇಕು. ಅವೈಜ್ಞಾನಿಕ ಕಾಮಗಾರಿಗಳನ್ನು ಗುರುತಿಸಿ ಸಮಸ್ಯೆ ಬಗೆಹರಿಸಬೇಕು. ಮೊದಲ ಆದ್ಯತೆಯಾಗಿ ಗುಂಡಿಗಳನ್ನು ಮುಚ್ಚಿ ಜನರ ಜೀವ ಉಳಿಸಬೇಕು.