<p><strong>ಸಿರಿಗೆರೆ:</strong> ಸಮೀಪದ ಕಡ್ಲೇಗುದ್ದು ಗ್ರಾಮದ ಬಳಿಯ ಐತಿಹಾಸಿಕ ಸಿದ್ಧನಗುಂಡಿ ಕ್ಷೇತ್ರವನ್ನು ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ಬುಧವಾರ ಸ್ವಚ್ಛಗೊಳಿಸಿದರು.</p>.<p>ವೇದಾಂತ ಲಿಮಿಟೆಡ್ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.</p>.<p>‘ಪರಿಸರ ನಮ್ಮ ಉಸಿರು, ನಮ್ಮ ಹಸಿರು. ಆಧುನಿಕತೆ ನೆಪದಲ್ಲಿ ಅಮೂಲ್ಯ ಗಿಡಮರಗಳನ್ನು ಕಡಿಯಲಾಗುತ್ತಿದ್ದು, ಜೀವಸಂಕುಲ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಎನ್. ಮಹೇಶ್ ಹೇಳಿದರು.</p>.<p>ಪರಿಸರದ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡ ವೇದಾಂತ ಸಂಸ್ಥೆಯು ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.</p>.<p>‘ನಮ್ಮ ಸಂಸ್ಥೆಯು ಪ್ರತಿವರ್ಷ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಿದೆ. ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ನಿರಂತರವಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ವೇದಾಂತ ಅಧಿಕಾರಿ ಶ್ರೀ ಅಭಿಷೇಕ್ ಶರ್ಮಾ ತಿಳಿಸಿದರು.</p>.<p>ವಿದ್ಯಾರ್ಥಿಗಳು, ಶಿಕ್ಷಕರು, ವೇದಾಂತ ಸಂಸ್ಥೆಯ ಸಿಬ್ಬಂದಿ ಕೈಯಲ್ಲಿ ಪೊರಕೆ, ಗುದ್ದಲಿ, ಪುಟ್ಟಿ ಹಿಡಿದು ಇಡೀ ಪುಣ್ಯಕ್ಷೇತ್ರವನ್ನು ಸ್ವಚ್ಛಗೊಳಿಸಿ ಪರಿಸರ ಕಾಳಜಿ ಮೆರೆದರು.</p>.<p>ಶಿಕ್ಷಕರಾದ ನಟರಾಜ್ ನಾಗರಾಜ್, ಸಂಸ್ಥೆಯ ಅಧಿಕಾರಿ ರಶ್ಮಿ ಹಾಗೂ ಸಿಬ್ಬಂದಿ ಮಂಜುನಾಥ್, ಅಭಿಷೇಕ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-394616322</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಸಮೀಪದ ಕಡ್ಲೇಗುದ್ದು ಗ್ರಾಮದ ಬಳಿಯ ಐತಿಹಾಸಿಕ ಸಿದ್ಧನಗುಂಡಿ ಕ್ಷೇತ್ರವನ್ನು ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ಬುಧವಾರ ಸ್ವಚ್ಛಗೊಳಿಸಿದರು.</p>.<p>ವೇದಾಂತ ಲಿಮಿಟೆಡ್ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.</p>.<p>‘ಪರಿಸರ ನಮ್ಮ ಉಸಿರು, ನಮ್ಮ ಹಸಿರು. ಆಧುನಿಕತೆ ನೆಪದಲ್ಲಿ ಅಮೂಲ್ಯ ಗಿಡಮರಗಳನ್ನು ಕಡಿಯಲಾಗುತ್ತಿದ್ದು, ಜೀವಸಂಕುಲ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಎನ್. ಮಹೇಶ್ ಹೇಳಿದರು.</p>.<p>ಪರಿಸರದ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡ ವೇದಾಂತ ಸಂಸ್ಥೆಯು ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.</p>.<p>‘ನಮ್ಮ ಸಂಸ್ಥೆಯು ಪ್ರತಿವರ್ಷ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಿದೆ. ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ನಿರಂತರವಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ವೇದಾಂತ ಅಧಿಕಾರಿ ಶ್ರೀ ಅಭಿಷೇಕ್ ಶರ್ಮಾ ತಿಳಿಸಿದರು.</p>.<p>ವಿದ್ಯಾರ್ಥಿಗಳು, ಶಿಕ್ಷಕರು, ವೇದಾಂತ ಸಂಸ್ಥೆಯ ಸಿಬ್ಬಂದಿ ಕೈಯಲ್ಲಿ ಪೊರಕೆ, ಗುದ್ದಲಿ, ಪುಟ್ಟಿ ಹಿಡಿದು ಇಡೀ ಪುಣ್ಯಕ್ಷೇತ್ರವನ್ನು ಸ್ವಚ್ಛಗೊಳಿಸಿ ಪರಿಸರ ಕಾಳಜಿ ಮೆರೆದರು.</p>.<p>ಶಿಕ್ಷಕರಾದ ನಟರಾಜ್ ನಾಗರಾಜ್, ಸಂಸ್ಥೆಯ ಅಧಿಕಾರಿ ರಶ್ಮಿ ಹಾಗೂ ಸಿಬ್ಬಂದಿ ಮಂಜುನಾಥ್, ಅಭಿಷೇಕ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-394616322</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>