<p><strong>ಚಿತ್ರದುರ್ಗ:</strong> ಭದ್ರಾ ಮೇಲ್ದಂಡೆ ಯೋಜನೆ ಅನುದಾನಕ್ಕೆ ಆಗ್ರಹಿಸಿ ಆಮರಣಾಂತ ಸತ್ಯಾಗ್ರಹ ನಡೆಸಿ ಅನಾರೋಗ್ಯಕ್ಕೆ ಒಳಗಾದ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ವೀರ ಸಂಗೊಳ್ಳಿ ರಾಯಣ್ಣ ಸೇನೆ ಕಾರ್ಯಕರ್ತರು ಪ್ರಾರ್ಥಿಸಿದರು.</p>.<p>ಇಲ್ಲಿನ ನಗರದೇವತೆ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ಭಾನುವಾರ ರೈತನಾಯಕ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. </p>.<p>‘ನಿಸ್ವಾರ್ಥ ಹೋರಾಟಗಾರರು ಈ ನೆಲಕ್ಕೆ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಅವರು ಶೀಘ್ರ ಗುಣಮುಖರಾಗಲೆಂದು ಜಿಲ್ಲೆಯ ಜನರೆಲ್ಲರೂ ದೇವರಲ್ಲಿ ಪ್ರಾರ್ಥಿಸಬೇಕು’ ಎಂದು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಆನಂದ್ ತಿಳಿಸಿದರು.</p>.<p>‘ಹೋರಾಟಗಾರ ತಿಪ್ಪೇಸ್ವಾಮಿ ಅನಾರೋಗ್ಯಕ್ಕೆ ಒಳಗಾಗಲು ಜಿಲ್ಲಾಡಳಿತವೇ ನೇರ ಹೊಣೆ. ಆದ್ದರಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು. ಇಲ್ಲವಾದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುತ್ತದೆ. ಜೊತೆಗೆ ಖುದ್ದು ಮುಖ್ಯಮಂತ್ರಿಗೆ ದೂರು ನೀಡಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಯಾವುದೇ ಸರ್ಕಾರಿ ಕಚೇರಿ ಬಳಿ ಸಾರ್ವಜನಿಕಕ ಹಿತಾಸಕ್ತಿಗಾಗಿ ಹೋರಾಟ ನಡೆಸುವವರ ಬಳಿಗೆ ಅಲ್ಲಿನ ಕಚೇರಿಯ ಮುಖ್ಯಸ್ಥರು ಆಗಮಿಸಿ ಮನವಿ ಸ್ವೀಕರಿಸುವ ಪದ್ಧತಿ ಇದೆ. ಆದರೆ, ಚಿತ್ರದುರ್ಗ ಜಿಲ್ಲಾಡಳಿತ ಕಚೇರಿಗೆ ಸಮೀಪದಲ್ಲಿ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವ ಬದ್ಧತೆ ಪ್ರದರ್ಶಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಜಗದೀಶ್, ದುಗೇಶ್, ಮುಖಂಡರಾದ ತಿಮ್ಮೇಶ್, ಪ್ರಜ್ವಲ್, ವಿಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಭದ್ರಾ ಮೇಲ್ದಂಡೆ ಯೋಜನೆ ಅನುದಾನಕ್ಕೆ ಆಗ್ರಹಿಸಿ ಆಮರಣಾಂತ ಸತ್ಯಾಗ್ರಹ ನಡೆಸಿ ಅನಾರೋಗ್ಯಕ್ಕೆ ಒಳಗಾದ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ವೀರ ಸಂಗೊಳ್ಳಿ ರಾಯಣ್ಣ ಸೇನೆ ಕಾರ್ಯಕರ್ತರು ಪ್ರಾರ್ಥಿಸಿದರು.</p>.<p>ಇಲ್ಲಿನ ನಗರದೇವತೆ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ಭಾನುವಾರ ರೈತನಾಯಕ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. </p>.<p>‘ನಿಸ್ವಾರ್ಥ ಹೋರಾಟಗಾರರು ಈ ನೆಲಕ್ಕೆ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಅವರು ಶೀಘ್ರ ಗುಣಮುಖರಾಗಲೆಂದು ಜಿಲ್ಲೆಯ ಜನರೆಲ್ಲರೂ ದೇವರಲ್ಲಿ ಪ್ರಾರ್ಥಿಸಬೇಕು’ ಎಂದು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಆನಂದ್ ತಿಳಿಸಿದರು.</p>.<p>‘ಹೋರಾಟಗಾರ ತಿಪ್ಪೇಸ್ವಾಮಿ ಅನಾರೋಗ್ಯಕ್ಕೆ ಒಳಗಾಗಲು ಜಿಲ್ಲಾಡಳಿತವೇ ನೇರ ಹೊಣೆ. ಆದ್ದರಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು. ಇಲ್ಲವಾದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುತ್ತದೆ. ಜೊತೆಗೆ ಖುದ್ದು ಮುಖ್ಯಮಂತ್ರಿಗೆ ದೂರು ನೀಡಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಯಾವುದೇ ಸರ್ಕಾರಿ ಕಚೇರಿ ಬಳಿ ಸಾರ್ವಜನಿಕಕ ಹಿತಾಸಕ್ತಿಗಾಗಿ ಹೋರಾಟ ನಡೆಸುವವರ ಬಳಿಗೆ ಅಲ್ಲಿನ ಕಚೇರಿಯ ಮುಖ್ಯಸ್ಥರು ಆಗಮಿಸಿ ಮನವಿ ಸ್ವೀಕರಿಸುವ ಪದ್ಧತಿ ಇದೆ. ಆದರೆ, ಚಿತ್ರದುರ್ಗ ಜಿಲ್ಲಾಡಳಿತ ಕಚೇರಿಗೆ ಸಮೀಪದಲ್ಲಿ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವ ಬದ್ಧತೆ ಪ್ರದರ್ಶಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಜಗದೀಶ್, ದುಗೇಶ್, ಮುಖಂಡರಾದ ತಿಮ್ಮೇಶ್, ಪ್ರಜ್ವಲ್, ವಿಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>