ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರಗಳು ಪತ್ತೆ!

ಚಳ್ಳಕೆರೆ ಗೇಟ್ ಸಮೀಪದಲ್ಲಿ ಜಗನ್ನಾಥ ರೆಡ್ಡಿ ಎಂಬ ನಾಮಫಲಕ ಇರುವ ಪಾಳು ಮನೆಯಲ್ಲಿ ಪತ್ತೆಯಾಗಿವೆ
Published 28 ಡಿಸೆಂಬರ್ 2023, 20:03 IST
Last Updated 28 ಡಿಸೆಂಬರ್ 2023, 20:03 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ಮನೆಯೊಂದರಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು, ತಲ್ಲಣ ಸೃಷ್ಟಿಸಿದೆ.

ಮನೆಯಲ್ಲಿ ಅಸ್ಥಿಪಂಜರಗಳು ಇರುವುದು ಗುರುವಾರ ರಾತ್ರಿ ಗೊತ್ತಾಗಿದೆ. ಚಳ್ಳಕೆರೆ ಗೇಟ್ ಸಮೀಪದಲ್ಲಿ ಜಗನ್ನಾಥ ರೆಡ್ಡಿ ಎಂಬ ನಾಮಫಲಕ ಇರುವ ಪಾಳು ಮನೆಯಲ್ಲಿ ಇವು ಪತ್ತೆಯಾಗಿವೆ.

ಹಲವು ವರ್ಷಗಳಿಂದ ಮನೆಗೆ ಬೀಗ ಹಾಕಲಾಗಿತ್ತು. ಈ ಹಿಂದೆ ಸ್ಥಳೀಯರು ಮನೆಯಿಂದ ವಾಸನೆ ಬರುತ್ತಿದೆ ಎಂದು ಮಾತನಾಡಿಕೊಂಡು ಸುಮ್ಮನಾಗಿದ್ದರು. ಬಡಾವಣೆ ಪೊಲೀಸರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ  ಅಸ್ಥಿಪಂಜರಗಳು ಇರುವುದು ಖಚಿತವಾಗಿದೆ.

ಶವಗಳು ಸಂಪೂರ್ಣ ಕೊಳೆತಿದ್ದು, ಮೂಳೆ ಕಾಣುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳದಲ್ಲಿ ಶ್ವಾನದಳ ಪರಿಶೀಲನೆ ನಡೆಸಿತು.

ಮೂವರು ಅಂದಾಜು ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ನಾಗರಿಕರು ಜಮಾಯಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮನೆ ಮುಂದೆ ಬ್ಯಾರಿಕೇಡ್ ಅಳವಡಿಸಿದ್ದಾರೆ. 

ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT