<p>ಚಿತ್ರದುರ್ಗ: ‘ನಗರದ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಇದರ ಅನುಷ್ಠಾನಕ್ಕೆ ಜನರ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಹಕಾರ ಅಗತ್ಯ’ ಎಂದು ಶಾಸಕ ಕೆ.ಸಿ.ವೀರೇಂದ್ರ ತಿಳಿಸಿದರು.</p>.<p>ಇಲ್ಲಿನ ಕೆಳಗೋಟೆ ಪ್ರದೇಶಕ್ಕೆ ಈಚೆಗೆ ಭೇಟಿ ನೀಡಿ ಜನರ ಕುಂದುಕೊರತೆ ಆಲಿಸಿ ಮಾತನಾಡಿದರು. ‘ನಗರದ ಅಭಿವೃದ್ಧಿ ನನ್ನ ಮೂಲ ಉದ್ದೇಶ. ವಿವಿಧೆಡೆ ಬೀದಿಬದಿ ತಿನಿಸಿನ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ನಗರಸಭೆಯಿಂದ ಆಹಾರ ಮಳಿಗೆ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿ ಆಹಾರ ಮಳಿಗೆ ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗಿದೆ. ಇದರಿಂದ ಜನರಿಗೆ, ಮಾಲೀಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಒಂದೇ ಸೂರಿನಡಿಯಲ್ಲಿ ಸಕಲ ಸೌಲಭ್ಯ ನೀಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಕೆಳಗೋಟೆಯ ಭೋವಿ ಕಾಲೊನಿಯ ರಾಜ ಕಾಲುವೆಯ ತಡೆಗೋಡೆಗಳು ಕುಸಿದಿವೆ. ಕೂಡಲೇ ಕ್ರಮವಹಿಸಬೇಕೆಂದು ಸ್ಥಳೀಯರು ಮನವಿ ಮಾಡಿದರು. ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಅವರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆ ಸರಿಪಡಿಸುವಂತೆ ಶಾಸಕರು ಸೂಚಿಸಿದರು.</p>.<p>ನಿವಾಸಿಗಳಾದ ಅಂಜಿನಪ್ಪ, ಮಲ್ಲಿಕಾರ್ಜುನ್, ಸುರೇಶ್, ರವಿಕುಮಾರ್, ಸುಜಾತಮ್ಮ, ಲಕ್ಷ್ಮಮ್ಮ, ಮಂಜಮ್ಮ, ಓಬಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-44-800872301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ನಗರದ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಇದರ ಅನುಷ್ಠಾನಕ್ಕೆ ಜನರ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಹಕಾರ ಅಗತ್ಯ’ ಎಂದು ಶಾಸಕ ಕೆ.ಸಿ.ವೀರೇಂದ್ರ ತಿಳಿಸಿದರು.</p>.<p>ಇಲ್ಲಿನ ಕೆಳಗೋಟೆ ಪ್ರದೇಶಕ್ಕೆ ಈಚೆಗೆ ಭೇಟಿ ನೀಡಿ ಜನರ ಕುಂದುಕೊರತೆ ಆಲಿಸಿ ಮಾತನಾಡಿದರು. ‘ನಗರದ ಅಭಿವೃದ್ಧಿ ನನ್ನ ಮೂಲ ಉದ್ದೇಶ. ವಿವಿಧೆಡೆ ಬೀದಿಬದಿ ತಿನಿಸಿನ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ನಗರಸಭೆಯಿಂದ ಆಹಾರ ಮಳಿಗೆ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿ ಆಹಾರ ಮಳಿಗೆ ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗಿದೆ. ಇದರಿಂದ ಜನರಿಗೆ, ಮಾಲೀಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಒಂದೇ ಸೂರಿನಡಿಯಲ್ಲಿ ಸಕಲ ಸೌಲಭ್ಯ ನೀಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಕೆಳಗೋಟೆಯ ಭೋವಿ ಕಾಲೊನಿಯ ರಾಜ ಕಾಲುವೆಯ ತಡೆಗೋಡೆಗಳು ಕುಸಿದಿವೆ. ಕೂಡಲೇ ಕ್ರಮವಹಿಸಬೇಕೆಂದು ಸ್ಥಳೀಯರು ಮನವಿ ಮಾಡಿದರು. ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಅವರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆ ಸರಿಪಡಿಸುವಂತೆ ಶಾಸಕರು ಸೂಚಿಸಿದರು.</p>.<p>ನಿವಾಸಿಗಳಾದ ಅಂಜಿನಪ್ಪ, ಮಲ್ಲಿಕಾರ್ಜುನ್, ಸುರೇಶ್, ರವಿಕುಮಾರ್, ಸುಜಾತಮ್ಮ, ಲಕ್ಷ್ಮಮ್ಮ, ಮಂಜಮ್ಮ, ಓಬಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-44-800872301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>